ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ 15,000 ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ … Continued

ಮೇರುಸಾಹಿತಿ ಎಸ್‌.ಎಲ್‌. ಭೈರಪ್ಪ ಪಂಚಭೂತಗಳಲ್ಲಿ ಲೀನ ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮೈಸೂರು: ಎರಡು ದಿನಗಳ ಹಿಂದೆ (ಸೆಪ್ಟೆಂಬರ್‌ ೨೪) ನಿಧನರಾದ ಮೇರು ಸಾಹಿತಿ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಡಾ.ಎಸ್.ಎಲ್ ಭೈರಪ್ಪ (SL Bhyrappa) ಾವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಅವರ ಪಾರ್ಥಿವ ಶರೀರ ಮೈಸೂರಿನ ( ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಇಂದು, ಶುಕ್ರವಾರ (ಸೆ.೨೬) ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅವರ … Continued

ಬಾಲ್ಯದಲ್ಲಿ ತಾಯಿ, ಅಣ್ಣ, ಅಕ್ಕ, ತಂಗಿ ಪ್ಲೇಗ್‌ ನಿಂದ ಸಾವು….ತಮ್ಮನ ಶವ ಒಬ್ಬನೇ ಹೊತ್ತೊಯ್ದು ಅಂತ್ಯಕ್ರಿಯೆ ಮಾಡಿದ್ದ ಬಾಲಕ ಭೈರಪ್ಪ

ಖ್ಯಾತ ಕಾದಂಬರಿಕಾರ, ಎಸ್‌.ಎಲ್‌. ಭೈರಪ್ಪ SL Bhyrappa)ಅವರು 94ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಆದರೆ ಭೈರಪ್ಪ ( ಅವರ ಬಾಲ್ಯ ಅತ್ಯಂತ ದುರಂತದಿಂದ ಕೂಡಿತ್ತು. ಅವರು ಬಾಲ್ಯದಲ್ಲಿ ಪ್ಲೇಗ್‌ಗೆ ತುತ್ತಾಗಿದ್ದರು. ಹೇಗೋ ಅದರಿಂದ ಪಾರಾದರು. ಆದರೆ ಅವರ ಕುಟುಂಬದ ಸದಸ್ಯರನ್ನು ಹೆಮ್ಮಾರಿ ಪ್ಲೇಗ್‌ ಬಲಿ ತೆಗೆದುಕೊಂಡಿತ್ತು. ಈ ಬಗ್ಗೆ ಅವರು ತಮ್ಮ ಆತ್ಮಕಥನ ಭಿತ್ತಿಯಲ್ಲಿಯೂ ಬರೆದಿದ್ದಾರೆ. ಅವರ … Continued

ಹಿರಿಯ ಸಾಹಿತಿ, ಬಹು ಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ ವಿಧಿವಶ

ಧಾರವಾಡ : ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹು ಭಾಷಾ ಪಂಡಿತ, ಹಿರಿಯ ಸಾಹಿತಿ, ವಿದ್ಯಾವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ (92) ) ಶುಕ್ರವಾರ (ಮಾರ್ಚ್ 14) ನಗರದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 1933 ಜನವರಿ 6ರಂದು ಜನಿಸಿದರು. … Continued

ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ, ಬರಹಗಾರ ಪ್ರಿತೀಶ್ ನಂದಿ ನಿಧನ

ಮುಂಬೈ : ಹೃದಯ ಸ್ತಂಭನದಿಂದ ಖ್ಯಾತ ಚಲನಚಿತ್ರ ನಿರ್ಮಾಪಕ ಹಾಗೂ ಪತ್ರಕರ್ತ ಪ್ರಿತೀಶ್ ನಂದಿ (73) ತಮ್ಮ ದಕ್ಷಿಣ ಮುಂಬೈ ನಿವಾಸದಲ್ಲಿ ಬುಧವಾರ ನಿಧನರಾದರು. ಝಂಕಾರ್ ಬೀಟ್ಸ್, ಚಮೇಲಿ, ಹಜಾರೋನ್ ಖ್ವೈಶೇನ್ ಐಸಿ, ಏಕ್ ಖಿಲಾಡಿ ಏಕ್ ಹಸೀನಾ, ಅಂಕಹೀ, ಪ್ಯಾರ್ ಕೆ ಸೈಡ್ ಎಫೆಕ್ಟ್ಸ್, ಬೋ ಬ್ಯಾರಕ್ಸ್ ಫಾರೆವರ್, ಮುಂತಾದ ಹಲವಾರು ಯಶಸ್ವಿ ಚಲನಚಿತ್ರಗಳನ್ನು … Continued

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ (96 ವರ್ಷ) ಮಂಗಳವಾರ ತಡರಾತ್ರಿ ನಗರದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು. ಗುರುಲಿಂಗ ಕಾಪಸೆ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಅವರು ಮೂಲತಃ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ … Continued

ಅಂಕೋಲಾ: ಖ್ಯಾತ ಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ

ಅಂಕೋಲಾ : ಖ್ಯಾತಸಾಹಿತಿ, ಪ್ರಕಾಶಕ, ಪತ್ರಕರ್ತರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ವಿಷ್ಣು ನಾಯ್ಕ (81) ಶನಿವಾರ ತಡರಾತ್ರಿ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಇಬ್ಬರು ಪುತ್ರಿಯರು ಇದ್ದಾರೆ. ಅಂಕೋಲಾದ ಅಂಬಾರಕೊಡ್ಲದವರಾಗಿರುವ ವಿಷ್ಣು ನಾಯ್ಕ ಅವರು 1944ರಲ್ಲಿ ತಾಲ್ಲೂಕಿನ ಅಂಬಾರಕೊಡ್ಲಾದಲ್ಲಿ ಜನಿಸಿದರು. ಎಂ.ಎ ಪದವೀಧರರಾಗಿದ್ದು, ದಿನಕರ ದೇಸಾಯಿ ಅವರ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. … Continued

ಖ್ಯಾತ ಕನ್ನಡ-ತುಳು ಸಾಹಿತಿ, ಜಾನಪದ-ಯಕ್ಷಗಾನ ವಿದ್ವಾಂಸ ಪ್ರೊ. ‌ಅಮೃತ ಸೋಮೇಶ್ವರ ಇನ್ನಿಲ್ಲ

ಮಂಗಳೂರು : ಕನ್ನಡದ ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ಯಕ್ಷಗಾನ ಪ್ರಸಂಗ ಕರ್ತೃ ಪ್ರೊ.ಅಮೃತ ಸೋಮೇಶ್ವರ (89) ಅವರು ಶನಿವಾರ (ಜನವರಿ 6) ಬೆಳಿಗ್ಗೆ ನಿಧನರಾದರು. ಅವರು ವಯೋಸಹಜವಾಗಿ ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ ‘ಒಲುಮೆ’ಯಲ್ಲಿ ನಿಧನರಾದರು. ಅಮೃತ ಸೋಮೇಶ್ವರ ಅವರಿಗೆ ಪತ್ನಿ ನರ್ಮದಾ, ಮಕ್ಕಳಾದ ಚೇತನ ಸೋಮೇಶ್ವರ, ಜೀವನ ಸೋಮೇಶ್ವರ ಇದ್ದಾರೆ. … Continued

ಸಾಹಿತಿ-ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ನಿಧನ

ಉಡುಪಿ: ಸಾಹಿತಿ, ಕವಿ, ನಾಟಕಕಾರ, ಯಕ್ಷಗಾನ ಪ್ರಸಂಗಕರ್ತ, ಯಕ್ಷಗಾನ ಅರ್ಥಧಾರಿಯಾಗಿದ್ದ ಅಪರೂಪದ ವ್ಯಕ್ತಿತ್ವದ ಅಂಬಾತನಯ ಮುದ್ರಾಡಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ಮಂಗಳವಾರ ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಹಾಗೂ ಶಿಷ್ರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಅಂಬಾತನಯ ಮುದ್ರಾಡಿ ಅವರು 1935ರ … Continued

ಆರ್‌ಎಸ್‌ಎಸ್‌ ಹಿರಿಯ ಪ್ರಚಾರಕ, ಲೇಖಕ ಚಂದ್ರಶೇಖರ ಭಂಡಾರಿ ನಿಧನ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಹಿರಿಯ ಪ್ರಚಾರಕ, ಲೇಖಕ ಚಂದ್ರಶೇಖರ ಭಂಡಾರಿ (87) ಅವರು ಭಾನುವಾರ ಬೆಂಗಳೂರಿನಲ್ಲಿ ನಿಧನರಾದರು. ಮೂಲತಃ ಮಂಗಳೂರಿನವರಾದ ಚಂದ್ರಶೇಖರ ಅವರು ಆರ್‌ಎಸ್‌ಎಸ್‌ನ ಪ್ರಚಾರ ಪ್ರಮುಖರಾಗಿ ಕಾರ್ಯನಿರ್ವಹಿಸಿದ್ದರು. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲೇಖಕ, ಅನುವಾದಕ, ಕವಿಯಾಗಿಯೂ ಗುರುತಿಸಿಕೊಂಡಿದ್ದ ಅವರು ಅಂಬೇಡ್ಕರ್‌ ಅವರ ಜೀವನದ ಕುರಿತ … Continued