ನಾವು ವೋಟ್​ ಬ್ಯಾಂಕ್ ರಾಜಕಾರಣ ಮಾಡಲ್ಲ, ಮನೆಮನೆಗೆ ನೀರು ಕೊಡ್ತೇವೆ, ಅಭಿವೃದ್ಧಿ ರಾಜಕಾರಣ ಮಾಡ್ತೇವೆ : ಪ್ರಧಾನಿ ಮೋದಿ

ಯಾದಗಿರಿ: ನಾವು ವೋಟ್​ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ. ನಾವು ಅಭಿವೃದ್ಧಿ ರಾಜಕಾರಣ ಮಾಡುತ್ತೇವೆ. ಯಾದರಿಗಿ ಸೇರಿದಂತೆ ದೇಶದ ಇಂಥ ಅನೇಕ ಜಿಲ್ಲೆಗಳಲ್ಲಿ ಆಕಾಂಕ್ಷಿ ಜಿಲ್ಲೆ ಎನ್ನುವ ಹೊಸ ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಗುರುವಾರ ಜಲಜೀವನ್ ಮಿಷನ್ ಯೋಜನೆಯಡಿ ಯಾದಗಿರಿ ಜಿಲ್ಲೆಯ 710 ಗ್ರಾಮೀಣ ವಸತಿ ಪ್ರದೇಶಗಳಿಗೆ ಕುಡಿಯುವ ನೀರಿನ ಸೌಕರ್ಯ ನೀಡುವ … Continued

ಹಿರಿಯ ಪತ್ರಕರ್ತ ಅನಿಲ ದೇಶಪಾಂಡೆ ನಿಧನ

posted in: ರಾಜ್ಯ | 0

ಯಾದಗಿರಿ: ಯಾದಗಿರಿ ಜಿಲ್ಲೆಯ ಹಿರಿಯ ಪತ್ರಕರ್ತ ಅನೀಲ ದೇಶಪಾಂಡೆ ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ . ಕೆಲ ಕಾಲದಿಂದ ಅವರು ಅನಾರೊಗ್ಯಕ್ಕೆ ಒಳಗಾಗಿದ್ದರು. . ಅನೀಲ ದೇಶಪಾಂಡೆ ಹೊಸ ದಿಗಂತ ಪತ್ರಿಕೆಯ ಯಾಗದಿರಿ ಜಿಲ್ಲಾ ವರದಿಗಾರಾಗಿ ಕಾರ್ಯನಿರ್ವಹಿಸುತ್ತಿದ್ದರು. ಯಾದಗಿರಿ ಜಿಲ್ಲೆಯ ಕ್ರಿಯಾಶೀಲ ವರದಿಗಾರರಾಗಿದ್ದ ಅನಿಲ ದೇಶಪಾಂಡೆ ಅನೇಕ ಜನಪರ ವರದಿಗಳ ಮೂಲಕ ಗುರುತಿಸಿಕೊಂಡಿದ್ದರು. ಸಂಯುಕ್ತ ಕರ್ನಾಟಕ … Continued

ಯಾದಗಿರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ಸಾವು

posted in: ರಾಜ್ಯ | 0

ಯಾದಗಿರಿ: ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ 1 ವರ್ಷದ ಹೆಣ್ಣುಮಗು ಸೇರಿ 6 ಜನ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ನಿನ್ನೆ ತಡರಾತ್ರಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಮೂರು ಜನ ಮೃತಪಟ್ಟರೆ ಹಾಗೂ ಮತ್ತೆ ಮೂವರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಗಂಭೀರ ಗಾಯಗೊಂಡ ಬಾಲಕನನ್ನು ಕಲಬುರಗಿಯ … Continued

ಜಗಳ ಬಗೆಹರಿಸಲು ಬಂದ ಪತ್ನಿ ಸಂಬಂಧಿಕರನ್ನು ಮನೆಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿದ ಪತಿ: ಒಬ್ಬರು ಸಾವು, ಮೂವರಿಗೆ ಗಾಯ

posted in: ರಾಜ್ಯ | 0

ಯಾದಗಿರಿ : ದಂಪತಿ ಜಗಳ ಸರಿಮಾಡಲು ಹೋಗಿದ್ದ ಪತ್ನಿಯ ಸಂಬಂಧಿಕರನ್ನೇ ಮನೆಯಲ್ಲಿ ಕೂಡಿಹಾಕಿ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ್ದು, ಈ ಘಟನೆಯಲ್ಲಿ ಒಬ್ಬರು ಸಾವಿಗೀಡಾಗಿ, ಇತರ ಮೂವರು ಗಾಯಗೊಂಡ ಘಟನೆ ನಾರಾಯಣಪುರದ ಛಾಯಾ ಕಾಲೊನಿಯಲ್ಲಿ ಬುಧವಾರ ನಡೆದಿದೆ‌. ಆರೋಪಿ ಶರಣಪ್ಪ  ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ … Continued

ಯಾದಗಿರಿ: ಆಟೋ ಹತ್ತಿದ ಯುವತಿಯನ್ನು ಬೇರೆಡೆ ಕರೆದೊಯ್ದು ರೇಪ್​-ವೀಡಿಯೋ ಚಿತ್ರೀಕರಿಸಿ ಯುವತಿಗೆ ಬೆದರಿಕೆ:ದೂರು ದಾಖಲು

posted in: ರಾಜ್ಯ | 0

ಯಾದಗಿರಿ: ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಹಾಡಹಗಲೇ ಆಟೋ ಚಾಲಕ ಮತ್ತು ಆತನ ಸ್ನೇಹಿತ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಿಸಿ ಹೆದರಿಸಿದ ಪೈಶಾಚಿಕ ಕೃತ್ಯ ಯಾದಗಿರಿ ತಾಲೂಕಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಈ ಕುರಿತು ಸಂತ್ರಸ್ತೆ ಚಿಕ್ಕಪ್ಪ ದೂರು ದಾಖಲಿಸಿದ್ದಾರೆ. ಮನೆ ಕೆಲಸ ಮಾಡಿಕೊಂಡಿದ್ದ ಯಾದಗಿರಿ ತಾಲೂಕಿನ ಹಳ್ಳಿಯೊಂದರ ಯುವತಿಯೊಬ್ಬಳು ಏ.26ರಂದು ಯಾದಗಿರಿ ನಗರಕ್ಕೆ ತೆರಳಲೆಂದು … Continued

ಕೆರೆಯಲ್ಲಿ ಮೀನು ಹಿಡಿಯಲು ಹೋದ ಬಾಲಕರಿಬ್ಬರು ನೀರುಪಾಲು

posted in: ರಾಜ್ಯ | 0

ಯಾದಗಿರಿ: ಕೆರೆಯಲ್ಲಿ ಮೀನು ಹಿಡಿಯಲು ಹೋದ ವಿದ್ಯಾರ್ಥಿಗಳಿಬ್ಬರು ನೀರು ಪಾಲಾದ ಘಟನೆ ಯಾದಗಿರಿ ನಗರದಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ಮೃತ ಬಾಲಕರನ್ನು ನಕುಲ್(12) ಮತ್ತು ನಿಹಾಲ್ ಸಿಂಗ್​(12) ಎಂದು ಗುರುತಿಸಲಾಗಿದೆ. ಯಾದಗಿರಿ ನಗರದ ಅಮರ್ ಲೇಔಟ್​ನಲ್ಲಿ ನಾಲ್ವರು ಬಾಲಕರು ಕಟ್ಟೆ ಬಳಿ ತೆರಳಿದ್ದರು. ಈ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಈ ವೇಳೆ ನಕುಲ್​ … Continued

ರಾಜ್ಯದಲ್ಲಿಯೂ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಪರೋಕ್ಷವಾಗಿ ಸಿಎಂ ಬೊಮ್ಮಾಯಿ ಸಮರ್ಥನೆ

posted in: ರಾಜ್ಯ | 0

ಯಾದಗಿರಿ: ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಕೆ ಮಾಡುವುದರಿಂದ ಮಕ್ಕಳಲ್ಲಿ ನೈತಿಕತೆ ಪ್ರಜ್ಞೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಹ್ಯಾಲಿಪ್ಯಾಡ್ ನಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಿರುವ ಬಗ್ಗೆ ನಮ್ಮ ಸಚಿವರು ಈಗಾಗಲೇ ಪ್ರಸ್ತಾಪ ಮಾಡಿದ್ದಾರೆ. ಇದು ಮಕ್ಕಳಲ್ಲಿ … Continued

ಭಾರತದ ಪ್ರಕೃತಿ ಕೃಷಿಗೆ ಪೂರಕವಾಗಿದ್ದು ಅದಕ್ಕೇ ಆದ್ಯತೆ ನೀಡಬೇಕಿದೆ: ಗೋವಿಂದಾಚಾರ್ಯ

posted in: ರಾಜ್ಯ | 0

ಯಾದಗಿರಿ: ಭಾರತ ಸಂಪನ್ಮೂಲ ಭರಿತ ದೇಶವಾಗಿದ್ದು, ಅದನ್ನು ಸದ್ಬಳಕೆ ಮಾಡಬೇಕಾಗಿದೆ ಎಂದು ಖ್ಯಾತ ಚಿಂತಕ ಹಾಗೂ ಭಾರತ ವಿಕಾಸ ಸಂಗಮದ ಸಂಸ್ಥಾಪಕ ಕೆ.ಎನ್. ಗೋವಿಂದಾಚಾರ್ಯ ಹೇಳಿದರು. ಲಕ್ಷೀ ನಗರದ ಶ್ರೀ ಲಕ್ಷೀ ಮಾರುತಿ ದೇವಸ್ಥಾನದಲ್ಲಿ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂಚಾಲಿತ ವಿಕಾಸ ಅಕಾಡೆಮಿ ವತಿಯಿಂದ ಹಮ್ಮಿಕೊಂಡ ಪ್ರಕೃತಿ ಕೇಂದ್ರಿತ ವಿಕಾಸ ಚಿಂತನಾ … Continued

ಯಾದಗಿರಿ : ನೇತ್ರದಾನಕ್ಕೆ ಮುಂದಾದ 39 ಯುವಕರು..!.

posted in: ರಾಜ್ಯ | 0

ಯಾದಗಿರಿ : ಜಿಲ್ಲೆಯ ಗುರುಮಟಕಲ್ ಕ್ಷೇತ್ರದ 39 ತಯವಕರು ತಮ್ಮ ನೇತ್ರಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಪುನೀತ ರಾಜಕುಮಾರ ಮರಣದ ನಂತರ ತಮ್ಮ ನೇತ್ರಗಳನ್ನು ದಾನ ಮಾಡಿದ ಪ್ರೇರಣೆಗೆ ಒಳಗಾದ 39 ಯುವಕರು ಜೆಡಿಎಸ್ ಯುವ ನಯಕ ಶರಣಗೌಡರ ಜನ್ಮದಿನದ ನೆನಪಿಗಾಗಿ ಕಲಬುರಗಿಯ ಹೆಚ್‌ಕೆಇ ಸೊಸಾಯಿಟಿಯ ಐ ಬ್ಯಾಂಕ್‌ಗೆ 39 ಜನ ನೇತ್ರದಾನ ಮಾಡುವುದಾಗಿ ಒಪ್ಪಿಗೆ … Continued

ಆಯುಧ ಪೂಜೆ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯೆಗೆ ಆಹ್ವಾನವಿಲ್ಲವೆಂದು ಮಾರಾಮಾರಿ; ಹಲವರಿಗೆ ಗಾಯ..!

posted in: ರಾಜ್ಯ | 0

ಯಾದಗಿರಿ: ನಗರಸಭೆ ಸದಸ್ಯೆಯೊಬ್ಬರನ್ನು ಆಯುಧ ಪೂಜೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂಬ ಕಾರಣಕ್ಕೆ ಮಾರಾಮಾರಿ ನಡೆದು ಒಂಭತ್ತು ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಗುರುವಾರ ರಾತ್ರಿ ಯಾದಗಿರಿ ನಗರದ ಲಾಡಿಜ್ಗಲ್ಲಿ ಬಡಾವಣೆಯ ಭವಾನಿ ಮಂದಿರ ಬಳಿ ಈ ಘಟನೆ ನಡೆದಿದೆ. ಆಯುಧ ಪೂಜೆ ಹಿನ್ನೆಲೆಯಲ್ಲಿ ಹಿಂದೂ ಸೇವಾ ಸಮಿತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯೆ … Continued