ಕಪ್ಪೆಕೆರೆ ಸೇರಿ ಮೂವರು ಸಾಧಕರು ಯಕ್ಷಮಂಗಳ ಪ್ರಶಸ್ತಿಗೆ ಆಯ್ಕೆ, ಕೃಷ್ಣಪ್ರಕಾಶರಿಗೆ ಕೃತಿ ಪ್ರಶಸ್ತಿ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಭಾಗವತರಾದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಕೃಷ್ಣಪ್ರಕಾಶ ಉಳಿಯತ್ತಾಯ ಅವರ … Continued

ಖ್ಯಾತ ಭಾಗವತ ವಿದ್ವಾನ್ ಗಣಪತಿ ಭಟ್ಟರಿಗೆ ಹೊಸ್ತೋಟ ಪ್ರಶಸ್ತಿ, ವಿದ್ವಾಂಸ ಪಾದೇಕಲ್ಲರಿಗೆ ಎಂ.ಎ.ಹೆಗಡೆ ದಂಟ್ಕಲ್ ಪ್ರಶಸ್ತಿ ಪ್ರಕಟ

ಶಿರಸಿ: ಯಕ್ಷ ಋಷಿ ಎಂದೇ ಹೆಸರಾಗಿದ್ದ ಹೊಸ್ತೋಟ ಮಂಜುನಾಥ ಭಾಗವತರ ಹೆಸರಿನ ನೀಡಲಾಗುವ ಪ್ರಶಸ್ತಿಯನ್ನು ಯಕ್ಷಗಾನದ ಬಡಗುತಿಟ್ಟಿನ ಪ್ರಸಿದ್ದ ಭಾಗವತ ವಿದ್ವಾನ್ ಗಣಪತಿ ಭಟ್ಟ ಮೊಟ್ಟೆಗದ್ದೆ ಅವರಿಗೆ ಹಾಗೂ ಯಕ್ಷಗಾನ, ಸಂಸ್ಕೃತ, ಕನ್ನಡದ ವಿದ್ವಾಂಸರಾಗಿದ್ದ ಪ್ರೊ.ಎಂ.ಎ.ಹೆಗಡೆ‌ ದಂಟ್ಕಲ್ ಅವರ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿಯನ್ನು ಯಕ್ಷಗಾನದ ವಿದ್ವಾಂಸ ಪಾದೇಕಲ್ಲು ವಿಷ್ಣು ಭಟ್ಟ ಅವರಿಗೆ ಪ್ರಕಟಿಸಲಾಗಿದೆ. ಸೋಂದಾ ಸ್ವರ್ಣವಲ್ಲೀ‌ … Continued