ಯಕ್ಷಗಾನದ ಖ್ಯಾತ ಹಾಸ್ಯ ಕಲಾವಿದ ಶ್ರೀಧರ ಭಟ್‌ ಕಾಸರಕೋಡ ನಿಧನ

ಹೊನ್ನಾವರ : ಬಡಗುತಿಟ್ಟಿನ ಯಕ್ಷಗಾನ ರಂಗಭೂಮಿ ಕಂಡ ಅಪರೂಪದ ಹಾಸ್ಯ ಕಲಾವಿದ ಶ್ರೀಧರ ಭಟ್‌ ಕಾಸರಕೋಡ (52) ಅವರು ಶುಕ್ರವಾರ ನಿಧನರಾಗಿದ್ದಾರೆ. ಅವರು ಅಲ್ಪಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯದ ಕಾರಣಕ್ಕೆ ಮಣಿಪಾಲ ಆಸ್ಪತ್ರೆಗೆ ಒಯ್ಯುವಾಗ ಮಾರ್ಗಮಧ್ಯೆಯೇ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೂಲತಃ ಹೊನ್ನಾವರ ತಾಲ್ಲೂಕಿನ ಕಾಸರಕೋಡ ಗ್ರಾಮದವರಾದ ಅವರು, ಪ್ರಸ್ತುತ ಸಾಲ್ಕೋಡ್ ಗ್ರಾಮದ ಮುಲ್ಲೆಮಕ್ಕಿಯಲ್ಲಿ … Continued

ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ ; ಕೆರೆಮನೆ ಶಿವಾನಂದ ಹೆಗಡೆ, ಅನಂತಕೃಷ್ಣ ಶರ್ಮ, ಜ್ಯೋತಿ ಹೆಗಡೆ ಸೇರಿ ಕರ್ನಾಟಕದ 6 ಸಾಧಕರಿಗೆ ಪ್ರಶಸ್ತಿ

ನವದೆಹಲಿ: ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಅತ್ಯುನ್ನತ ಫೆಲೋಶಿಪ್ (ಅಕಾಡೆಮಿ ರತ್ನ) ಹಾಗೂ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ 2024 ಮತ್ತು 2025ನೇ ಸಾಲಿನ ಪ್ರತಿಷ್ಠಿತ ‘ಅಕಾಡೆಮಿ ಪ್ರಶಸ್ತಿಗಳು’ ಹಾಗೂ ಫೆಲೊಶಿಪ್‌ಗಳನ್ನು ಪ್ರಕಟಿಸಲಾಗಿದೆ. ಒಟ್ಟು ಏಳು ಸಾಧಕರನ್ನು ಅಕಾಡೆಮಿ ಫೆಲೋಶಿಪ್‌ ಗೌರವಕ್ಕೆ ಭಾಜನರಾಗಿದ್ದಾರೆ ಹಾಗೂ 108 ಸಾಧಕರನ್ನು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕದಿಂದ ಮೃದಂಗ … Continued

ಹೊನ್ನಾವರ : ಯಕ್ಷಗಾನದ ಖ್ಯಾತ ಭಾಗವತ ಕಪ್ಪೆಕೆರೆ ಸುಬ್ರಾಯ ಹೆಗಡೆ ಇನ್ನಿಲ್ಲ

ಹೊನ್ನಾವರ : ಲಯಬ್ರಹ್ಮರೆಂದೇ ಖ್ಯಾತರಾಗಿದ್ದ ಬಡಗುತಿಟ್ಟು ಯಕ್ಷಗಾನದ ಅಗ್ರಮಾನ್ಯ ಸಾಂಪ್ರದಾಯಿಕ ಭಾಗವತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದ ಕಪ್ಪೆಕೆರೆ ಸುಬ್ರಾಯ  ಹೆಗಡೆ (79) ಬುಧವಾರ (ಮೇ 13) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.  ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. 1947೭ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ … Continued

ಯಕ್ಷಗಾನ ಭರತನ ನಾಟ್ಯಶಾಸ್ತ್ರದ ಜೀವಂತ ಪ್ರಯೋಗ ; ಶುದ್ಧ ಯಕ್ಷಗಾನವು ಭಾರತೀಯ ಸಾಂಸ್ಕೃತಿಕತೆಯ ಸಾರ ; ಅಶೋಕ ಹಾಸ್ಯಗಾರ

ಬೆಂಗಳೂರು : ಯಕ್ಷಗಾನವು ಭರತಮುನಿಯ ನಾಟ್ಯಶಾಸ್ತ್ರದ ಜೀವಂತ ಪ್ರಯೋಗವಾದುದರಿಂದ ಇದು ಭಾರತೀಯ ಸಾಂಸ್ಕೃತಿಕತೆಯ ಉನ್ನತ ಪ್ರದರ್ಶನವಾಗಿದೆ ಎಂದು ಸಂಶೋಧಕ ಹಾಗೂ ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರ ಅಭಿಪ್ರಾಯಪಟ್ಟರು. ಅವರು ಇಲ್ಲಿಯ ಕೋರಮಂಗಲದ ಇಂಡಿಯನ್ ಹೆರಿಟೇಜ್ ಅಕಾಡೆಮಿಯು ಮೇ ೮, ೨೦೨೬ ರಂದು ಕಶ್ಯಪ ಸಭಾಂಗಣದಲ್ಲಿ ಏರ್ಪಡಿಸಿದ್ದ “ಭಾರತೀಯ ಸಾಂಸ್ಕೃತಿಕತೆ, ನಾಟ್ಯಶಾಸ್ತ್ರ ಮತ್ತು ಯಕ್ಷಗಾನ” ಎಂಬ ವಿಷಯದ … Continued

ಜಿ.ಆರ್.ಪಂಡಿತರ ಯಕ್ಷಗಾನದ ಚೌಕಿಮನೆ ಛಾಯಾಚಿತ್ರಕ್ಕೆ ಅಂತಾರಾಷ್ಟ್ರೀಯ ಬಹುಮಾನ

ಶಿರಸಿ : ಸಾಗರದ ಜಿ.ಆರ್.ಪಂಡಿತ ಅವರು ತೆಗೆದ ಯಕ್ಷಗಾನದ ಒಂದು ಮೇಕಪ್ ಫೋಟೋಕ್ಕೆ ಅಂತಾರಾಷ್ಟ್ರೀಯ ಬಹುಮಾನಕ್ಕೆ ಪಾತ್ರವಾಗಿದೆ. ಇದೇ ಏಪ್ರಿಲ್ ನಲ್ಲಿ ಯುರೋಪಿನ ಸರ್ಬಿಯಾ ದೇಶದ ನೊವಿಸಡ್ ನಗರದ ಸ್ಟರಿಜಿನೊ ಪೊಜೊರ್ಜೆ ಎಂಬ ಖ್ಯಾತ ಛಾಯಾಗ್ರಹಣ ಸಂಸ್ಥೆಯು ಆಯೋಜಿಸಿದ್ದ 18ನೇ “ಟ್ರೈಯೇನಿಯಲ್ ಫೋಟೋಗ್ರಫಿಕ್ ಆರ್ಟ್ ನಲ್ಲಿ ಥಿಯೇಟರ್” ಎಂಬ ಹೆಸರಿನ ಜಾಗತಿಕ ಮಟ್ಟದ ಸ್ಪರ್ಧೆಯಲ್ಲಿ 13 … Continued

ಬೆಂಗಳೂರು : ಮೇ 8ರಂದು ಭಾರತೀಯ ಸಾಂಸ್ಕೃತಿಕತೆ, ನಾಟ್ಯಶಾಸ್ತ್ರ ಮತ್ತು ಯಕ್ಷಗಾನ ಕುರಿತು ಮಾತುಕತೆ-ಸಂವಾದ

ಬೆಂಗಳೂರು : ಅಜಿಂ ಪ್ರೇಮಜೀ ವಿಶ್ವ ವಿದ್ಯಾಲಯದಿಂದ ಭಾರತೀಯ ಸಾಂಸ್ಕೃತಿಕತೆ,  ನಾಟ್ಯಶಾಸ್ತ್ರ ಹಾಗೂ ಯಕ್ಷಗಾನ ಈ ಕರಾವಳಿ ಪರಂಪರೆಯ ದೃಶ್ಯ ಕಾವ್ಯದ ಕುರಿತು  ಮಾತು-ಸಂವಾದ ಕಾರ್ಯಕ್ರಮ ಬೆಂಗಳೂರಿನ ಕೋರಮಂಗಲದ ಇಂಡಿಯನ್‌ ಹೆರಿಟೇಜ್‌ ಅಕಾಡೆಮಿಯಲ್ಲಿ ಮೇ 8ರಂದು ಸಂಜೆ 6:30ರಿಂದ ನಡೆಯಲಿದೆ. ದಶಕರೂಪಕಗಳ ದಶಾವತಾರಗಳು-ಯಕ್ಷಗಾನ ಸಂಶೋಧನಾ ಕೃತಿಯ ಲೇಖಕ ಹಾಗೂ ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರ ಅವರು  … Continued

ಯಕ್ಷಗಾನದ ಮೇರು ಕಲಾವಿದ ಗೋವಿಂದ ಭಟ್‌ ಇನ್ನಿಲ್ಲ

ಮಂಗಳೂರು :  ತೆಂಕುತಿಟ್ಟು ಶೈಲಿಯ ಹಿರಿಯ ಯಕ್ಷಗಾನ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ (85) ಅವರು ವಿಧಿವಶರಾಗಿದ್ದಾರೆ. ಶುಕ್ರವಾರ ರಾತ್ರಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಹೆದ್ದೂರಿನ ತಮ್ಮ  ಪುತ್ರನ‌ ನಿವಾಸದಲ್ಲಿ ನಿಧನರಾಗಿದ್ದಾರೆ. ಏಳು ದಶಕಗಳ ಕಾಲ ರಂಗಸ್ಥಳವನ್ನೇ ಉಸಿರಾಗಿಸಿಕೊಂಡಿದ್ದ ಅದ್ವಿತೀಯ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ ಅವರು ಯಕ್ಷಗಾನದ ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು … Continued

ಯಕ್ಷಗಾನ ಅಕಾಡೆಮಿ ಪ್ರಶಸ್ತಿಗಳು ಪ್ರಕಟ ; ರೆಂಜಾಳ ರಾಮಕೃಷ್ಣ ರಾವ್ ಸೇರಿ ಐವರಿಗೆ ಗೌರವ ಪುರಸ್ಕಾರ, ಅಶೋಕ ಹಾಸ್ಯಗಾರರ ಕೃತಿಗೆ ಪುಸ್ತಕ ಬಹುಮಾನ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯು 2025ನೇ ಸಾಲಿನ ಪ್ರತಿಷ್ಠಿತ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ಮತ್ತು ವಿವಿಧ ದತ್ತಿನಿಧಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಒಟ್ಟು 18 ಜನ ಹಿರಿಯ ಹಾಗೂ ಸಾಧಕ ಕಲಾವಿದರು ಈ ಸಾಲಿನ ಗೌರವಕ್ಕೆ ಪಾತ್ರರಾಗಿದ್ದಾರೆ. ಇದೇ ವೇಳೆ, 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಗಳನ್ನೂ ಘೋಷಿಸಲಾಗಿದೆ. ಯಕ್ಷಗಾನ ಕ್ಷೇತ್ರದಲ್ಲಿನ … Continued

ಯಕ್ಷಗಾನದ ಖ್ಯಾತ ಭಾಗವತ ದಿನೇಶ ಅಮ್ಮಣ್ಣಾಯ ನಿಧನ

ಮಂಗಳೂರು: ಯಕ್ಷಗಾನದ ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ ಅಮ್ಮಣ್ಣಾಯ(65) ಅವರು ಇಂದು, ಗುರುವಾರ (ಅಕ್ಟೋಬರ್‌ ೧೬) ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ಗುರುವಾರ ಕೊನೆಯುಸಿರೆಳೆದಿದ್ದಾರೆ. ತೆಂಕುತಿಟ್ಟು ಯಕ್ಷಗಾನ (Yakshagana) ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ಅವರು ‘ರಸರಾಗ … Continued

ಸಿದ್ದಾಪುರ | ಮದ್ದಳೆ ವಾದಕ ಶಂಕರ ಭಾಗವತರಿಗೆ ಅನಂತ ಶ್ರೀ ಪ್ರಶಸ್ತಿ ಪ್ರದಾನ ; ʼಕೊಳಗಿ ಅನಂತಣ್ಣʼ ಕೃತಿ ಬಿಡುಗಡೆ

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆ ವಿವಿಧ ಕಲೆಗಳಿಗೆ ಹೆಸರುವಾಸಿಯಾಗಿದೆ. ಈಗ ಭಾಗದ ಎಲ್ಲೆಡೆಗಳಲ್ಲಿ ಹಿಂದೂಸ್ತಾನೀ ಸಂಗೀತಗಾರರು ಸಿಗುತ್ತಾರೆ. ಆದರೆ ಯಕ್ಷಗಾನ ಕಲಾವಿದರ ಕೊರತೆ ಎದ್ದು ಕಾಣುತ್ತಿದೆ. ಇಲ್ಲಿನ ಅಧಿಕಾರಿಗಳು ಮತ್ತು ರಾಜಕಾರಣಿಗಳು ಯಕ್ಷಗಾನ ಕಲೆಗೆ ಸಲ್ಲಿಸಬೇಕಾದ ಸೇವೆ, ಗೌರವವನ್ನು ಸಲ್ಲಿಸುವಲ್ಲಿ ವಿಫಲರಾದಂತಿದೆ ಎಂದು ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಐನಕೈ ಹೇಳಿದರು. ಉತ್ತರ … Continued