ಪ್ರವಾಸಕ್ಕೆಂದು‌ ಬಂದಿದ್ದ ವ್ಯಕ್ತಿ ಸಾತೊಡ್ಡಿ ಜಲಪಾತದಲ್ಲಿ ಮುಳುಗಿ ಸಾವು

ಯಲ್ಲಾಪುರ: ಪ್ರವಾಸಕ್ಕೆಂದು‌ ಬಂದಿದ್ದ ವ್ಯಕ್ತಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಾತೊಡ್ಡಿ ಜಲಪಾತದಲ್ಲಿ ಸಂಭವಿಸಿದ ವರದಿಯಾಗಿದೆ. ಭಾನುವಾರ ಪ್ರವಾಸಕ್ಕೆ ಬಂದಿದ್ದ ಹುಬ್ಬಳ್ಳಿಯ ಪೋತುಲ್ ರಾಮ ರಾವ್ (೫೧) ಮೃತರು ಎಂದು ಗುರುತಿಸಲಾಗಿದ್ದು, ಇವರ ಮೃತದೇಹವು ಸೋಮವಾರ ದೊರೆತಿದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಕ್ಕೆಂದು ಅವರು ಬಂದಿದ್ದರು. ಈಜಲು ನೀರಿಗೆ ಇಳಿದು ನಂತರ ಮುಳುಗಿದ್ದು, … Continued

ಯಲ್ಲಾಪುರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್.ಹೆಗಡೆ ಕುಂದರಗಿ ನಿಧನ

ಯಲ್ಲಾಪುರ: ಸಾಮಾಜಿಕ ಕಾರ್ಯಕರ್ತ,ಹಿರಿಯ ಸಹಕಾರಿ ಧುರಿಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್.ಹೆಗಡೆ ಕುಂದರಗಿ ಗುರುವಾರ ನಿಧನರಾದರು. ಅವರಿಗೆ ೯೦ ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಓರ್ವ ಪುತ್ರ, ಮೂವರು ಪುತ್ರಿಯರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಾಮಾಜಿಕ,ಶೈಕ್ಷಣಿಕ ಹಾಗೂ ಸಹಕಾರಿ ರಂಗದಲ್ಲಿ ಅಪಾರ ಕೊಡುಗೆ ನೀಡಿದ್ದ ಅವರು ಕುಂದರಗಿಯಲ್ಲಿ … Continued

ಯಲ್ಲಾಪುರ: 40ಕ್ಕೂ ಹೆಚ್ಚು ಟರ್ಕಿ ಕೋಳಿಗಳ ಸಾವು, ವಿಷಪ್ರಾಶನದ ಶಂಕೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೋಟೆಮನೆಯಲ್ಲಿ ಮಹಿಳೆಯೊಬ್ಬಳ 40ಕ್ಕೂ ಹೆಚ್ಚು ಕೋಳಿಗಳು ಸಾವಿಗೀಡಾದ ವರದಿಯಾಗಿದ್ದು, ವಿಷ ಪ್ರಾಷನದ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳು ವಿಷ ಪ್ರಾಶನ ಮಾಡಿದ್ದರಿಂದ ಉಮ್ಮಚಗಿಯ ಕಲಾವತಿ ಸೋಮಿನ್ ಸಿದ್ದಿ ಎಂಬ ಮಹಿಳೆಗೆ ಸೇರಿದ ಸುಮಾರು 40ಕ್ಕೂ ಹೆಚ್ಚು ಟರ್ಕಿ ಕೋಳಿಗಳು ಎರಡು ಹಂತಗಳಲ್ಲಿ ಸಾವಿಗೀಡಾಗಿದೆ. … Continued

ಯಲ್ಲಾಪುರ: ಅರೆಬೈಲ್‌ ಘಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣ: ಮೂವರು ಅಂತಾರಾಜ್ಯ ಕಳ್ಳರ ಬಂಧನ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಕಾರು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಂತಾರಾಜ್ಯ ದರೋಡೆಕೋರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಸರಗೋಡಿನ ಸಿರಿಯಾದ ಮಹಮ್ಮದ್ ಕಬೀರ್ ಮೈನುದ್ದೀನ್, ಕೋಜಿಕೋಡಿನ ಸುಭಾಸ ರಾಧಾಕೃಷ್ಣನ್ ಹಾಗೂ ಪಾಲಕ್ಕಾಡಿನ ನಿವೇಶ ಅಪ್ಪು ವಿಜಯಕೃಷ್ಣನ್ ಬಂಧಿತ ಆರೋಪಿಗಳಾಗಿದ್ದಾರೆ. … Continued

ಯಲ್ಲಾಪುರ ಅರೆಬೈಲ್‌ ಘಟ್ಟದಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಅಡ್ಡಗಟ್ಟಿ 2 ಕೋಟಿ ರೂ.ಗಳಿಗೂ ಹೆಚ್ಚು ಹಣ ದರೋಡೆ ..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಸ್ವಿಫ್ಟ್ ಕಾರು ಸಮೇತ ಕಾರಿನಲ್ಲಿದ್ದ ಕೋಟ್ಯಾಂತರ ರೂ ಹಣವನ್ನು ದರೋಡೆ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಡ್ಡಗಟ್ಟಿ 2 ಕೋಟಿ ರೂ.ಗಳಿಗೂ ಹೆಚ್ಚು ಹಣ ದೋಚಿಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ. ಅಕ್ಟೋಬರ್ 1ರ ಶನಿವಾರ ರಾತ್ರಿ ಘಟ್ಟದ ನಿರ್ಜನ ಪ್ರದೇಶದಲ್ಲಿ ಈ ಘಟನೆ … Continued

ಯಲ್ಲಾಪುರ: ಗುಳ್ಳಾಪುರ ಸಮೀಪ ಬೈಕ್‌ಗೆ ಲಾರಿ ಡಿಕ್ಕಿ, ಇಬ್ಬರ ಸಾವು

ಯಲ್ಲಾಪುರ: ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ ೬೩ ಮೇಲೆ ಉತ್ತರ ಕನ್ನಡ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸಮೀಪದ ಇಂಚರ ಹೊಟೇಲ್ ಬಳಿ ನಡೆದಿದೆ. ಮೃತರನ್ನು ಮಹಂತೇಶ ರೇವಣಪ್ಪ ಶೀಲವಂತರ( ೨೩) ಹುಬ್ಬಳ್ಳಿ, ಹಾಗೂ ಸುಮಿತ್ ಅಶೋಕ ಬಸವಾ (೨೫) ಹಳೆ ಹುಬ್ಬಳ್ಳಿ ಎಂದು ಗುರುತಿಸಲಾಗಿದೆ. … Continued

ಯಲ್ಲಾಪುರ: ಸಾವಿರ ವರ್ಷದ ಹಿಂದಿನ ಪುರಾತನ ದೇವಾಲಯದ ಬಳಿ ನಿಧಿಗಾಗಿ ಶೋಧ

ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಹೊನಗದ್ದೆ ಸಮೀಪದ ಗಡುಗದ್ದೆ ಬಳಿ ಇರುವ ಪುರಾತನ ಪಾಳುಬಿದ್ದ ದೇವಾಲಯದ ಬಳಿ ದುಷ್ಕರ್ಮಿಗಳು ನಿಧಿಗಾಗಿ ಶೋಧ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಗಡುಗದ್ದೆ ಬಳಿ ಪಾಳುಬಿದ್ದ ಸ್ಥಿತಿಯಲ್ಲಿ ಇರುವ ಸುಮಾರು ಒಂದೂವರೆ ಸಾವಿರ ವರ್ಷಗಳ ಹಿಂದಿನ ಶಿವ ದೇವಾಲಯದಲ್ಲಿ ಎರಡು ಶಿವ ಲಿಂಗಗಳು, ವರಗಣಪತಿ ಮೂರ್ತಿ, ಮಣ್ಣಿನಲ್ಲಿ … Continued

ಏಪ್ರಿಲ್‌ ೨೫ರಂದು ಜಿಲ್ಲಾಮಟ್ಟದ ಹೆಬ್ಬಾರ ಟ್ರೋಫಿ ಕಬಡ್ಡಿ ಪಂದ್ಯಾವಳಿ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ನಂದೊಳ್ಳಿಯ ಶ್ರೀ ಸಿದ್ಧಿವಿನಾಯಕ ಗೆಳೆಯರ ಬಳಗ (ಕಬಡ್ಡಿ) ಸಮಿತಿಯ ಆಶ್ರಯದಲ್ಲಿ ಏಪ್ರಿಲ್‌ ೨೫ ರಂದು ನಂದೊಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಮ್ಯಾಟ್ ಹೆಬ್ಬಾರ ಟ್ರೋಫಿ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ಪ್ರಥಮ ಬಹುಮಾನ ೨೫೦೦೧, ದ್ವಿತೀಯ ಬಹುಮಾನ ೧೫೦೦೧, ತೃತೀಯ ೧೦೦೦೧, ಚತುರ್ಥ ಬಹುಮಾನ ೭೦೦೧ ರೂ.ಗಳ ಬಹುಮಾನವಿದೆ. … Continued

ಯಲ್ಲಾಪುರ: ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ, ಬಸ್ ಸುಟ್ಟು ಕರಕಲು-ವಿಡಿಯೊದಲ್ಲಿ ಸೆರೆ

ಯಲ್ಲಾಪುರ: ಬೆಂಕಿ ಅವಘಢದಿಂದ ಖಾಸಗಿ ಬಸ್ಸೊಂದು ಧಗ, ಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಗುರುವಾರ ಬೆಳಗಿನ ಜಾವ ಯಲ್ಲಾಪುರ ಪಟ್ಟಣದ ಜೋಡುಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ-63 ರಲ್ಲಿ ನಡೆದಿದೆ. ಈ ಬಸ್ಸು ಮುಂಬೈಯಿಂದ ಕೇರಳಕ್ಕೆ ಹೋಗುತ್ತಿತ್ತು. ಬಸ್ಸಿನಲ್ಲಿ 28 ಜನರು ಪ್ರಯಾಣಿಸುತ್ತಿದ್ದರು. ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ. ತಕ್ಷಣ ಅಗ್ನಿಶಾಮಕ ದಳದವರು ತಕ್ಷಣ … Continued

ಹುಬ್ಬಳ್ಳಿ-ಅಂಕೋಲಾ ರೈಲು: ವನ್ಯಜೀವಿ ಮಂಡಳಿಯಿಂದ ಹೈಕೋರ್ಟ್ ಸಾಧಕ-ಬಾಧಕದ ವರದಿ ಕೇಳಿದ್ದು ಸಕಾರಾತ್ಮಕ ಬೆಳವಣಿಗೆ

ಯಲ್ಲಾಪುರ: ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗಕ್ಕೆ ಈಗಾಗಲೇ ಅರಣ್ಯ ಇಲಾಖೆಯಿಂದ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಆದರೆ, ಕೆಲವು ಸರ್ಕಾರೇತರ ಸಂಘ ಸಂಸ್ಥೆಗಳು ಮತ್ತು ಪರಿಸರವಾದಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಅದಕ್ಕೆ ಹಿನ್ನಡೆಯಾಗಿತ್ತು ಎಂದು ಅರಣ್ಯ ಮತ್ತು ಪರಿಸರ, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಉಮೇಶ್ ಕತ್ತಿ ಹೇಳಿದರು. ಪಟ್ಟಣಕ್ಕೆ ಗುರುವಾರ ಸಂಜೆ ತಮ್ಮ ಕುಟುಂಬದೊಂದಿಗೆ … Continued