ಯಲ್ಲಾಪುರ | ಗುಳ್ಳಾಪುರದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿ ;10 ಮಂದಿ ಸಾವು

ಯಲ್ಲಾಪುರ : ಬುಧವಾರ ಬೆಳ್ಳಂಬೆಳಗ್ಗೆ ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ10 ಜನರು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗುಳ್ಳಾಪುರದ ಬಳಿ ಈ ಅಪಘಾತ ಸಂಭವಿಸಿದ್ದು 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಫಯಾಜ್‌ ಜಮಖಂಡಿ (45), ವಾಸಿಮ್‌ ಮುಡಿಗೇರಿ (25), ಇಜಾಜ್‌ … Continued

ಯಲ್ಲಾಪುರ : ಬೈಕ್‌ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು ; ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಿಗೆ ಗಂಭೀರ ಗಾಯ

ಯಲ್ಲಾಪುರ : ಶನಿವಾರ ಬೆಳಿಗ್ಗೆ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಂದ್ಗುಳಿ ವ್ಯಾಪ್ತಿಯ ಉಪಳೇಶ್ವರ ಹುತ್ಕಂಡ ಭಾಗದಲ್ಲಿ ನಡೆದಿದೆ. ಈ ಭಾಗದಲ್ಲಿ ಮೂರು ಕರಡಿಗಳು ಸಂಚರಿಸುತ್ತಿದ್ದು ಶನಿವಾರ ಬೆಳಿಗ್ಗೆ ಏಳು ಗಂಟೆ ಹೊತ್ತಿಗೆ ಕಾರ್ಯನಿರ್ಮಿತ್ತ ದ್ವಿಚಕ್ರವಾಹನದಲ್ಲಿ ಚಂದ್ಗುಳಿ ಪಂಚಾಯತದ ಸದಸ್ಯ ಹಾಗೂ ಪಿ.ಎಲ್.ಡಿ ಬ್ಯಾಂಕ್ … Continued

ಯಲ್ಲಾಪುರ : ಅತಿಕ್ರಮಣದಾರರಿಗೆ ಸಂಸದ ಕಾಗೇರಿ ಭರವಸೆ

ಯಲ್ಲಾಪುರ : ಈಗಾಗಲೇ ಅತಿಕ್ರಮಣ ಆಗಿರುವ ಜಾಗದಿಂದ ಯಾರನ್ನೂ ಕದಲಿಸಲು ಬಿಡುವುದಿಲ್ಲ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅತಿಕ್ರಮಣದಾರರಿಗೆ ಭರವಸೆ ನೀಡಿದ್ದಾರೆ. ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಅತಿಕ್ರಮಣದಾರರ ಮನವಿ ಸ್ವೀಕರಿಸಿ ಮಾತನಾಡಿದ ಅವರು, ನಿಮ್ಮ ಹಕ್ಕಿಗೆ ತೊಂದರೆಯಾಗದ ಹಾಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಹೊಸದಾಗಿ ಏನೂ ಮಾಡಲು ಹೋಗುವುದು ಬೇಡ. … Continued

ಮಾಗೋಡು ಜಲಪಾತದ ರಸ್ತೆಯಲ್ಲಿ ಭೂ ಕುಸಿತ

ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹೆಸರಾಂತ ಮಾಗೋಡಿನ ಜಲಪಾತಕ್ಕೆ ಹೋಗುವ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿ ಜಲಪಾತಕ್ಕೆ ಹೋಗುವ ರಸ್ತೆ ಸಂಪರ್ಕ ಕಡಿತಗೊಂಡಿದೆ. ಯಲ್ಲಾಪುರ ತಾಲೂಕಿನ ಮೊಟ್ಟೆ ಗೆದ್ದೆ ಸಮೀಪದ ಕಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿನ ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದು ಮಾಗೋಡ್ ಫಾಲ್ಸ್ ಗೆ ಹೋಗುವ ರಸ್ತೆ ಕಡಿತಗೊಂಡಿದೆ. ಹೀಗಾಗಿ ಮಾಗೋಡ … Continued

ಯಲ್ಲಾಪುರ | ಗಾಳಿಮಳೆ ; ಸ್ಕೂಟರಿನಲ್ಲಿ ಹೋಗುತ್ತಿದ್ದಾಗ ಮರ ಬಿದ್ದು ಸಾವು

ಯಲ್ಲಾಪುರ: ಸ್ಕೂಟರ್‌ ಸವಾರನ ಮೇಲೆ ಮರ ಬಿದ್ದು ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ಸಮೀಪದ ಮಾಳಕೊಪ್ಪ ಶಾಲೆಯ ಎದುರು ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ಕಬ್ಬಿನಗದ್ದೆಯ ವಿನಯ ಮಂಜುನಾಥ ಗಾಡಿಗ (25) ಗುರುತಿಸಲಾಗಿದೆ. ಈತ ಮನೆಯಿಂದ ತನ್ನ ಸ್ಕೂಟರಿನಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾಗ ಆತನ … Continued

ಪ್ರವಾಸಿಗರಿಗೆ ಮಾಹಿತಿ: ಭಾರೀ ಮಳೆ, ಯಲ್ಲಾಪುರ ಸಾತೊಡ್ಡಿ ಜಲಪಾತ ವೀಕ್ಷಣೆಗೆ ನಿಷೇಧ

ಯಲ್ಲಾಪುರ : ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಈಗ ಪ್ರವೇಶ ನಿಷೇಧಿಸಲಾಗಿದೆ. ಭಾರೀ ಮಳೆಯಿಂದಾಗಿ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಪ್ರವಾಸಿಗರಿಗೆ ಗುರುವಾರದಿಂದ ಮುಂದಿನ ಆದೇಶದವರೆಗೆ ಜಲಪಾತ ಪ್ರವೇಶವನ್ನು ಅರಣ್ಯ ಇಲಾಖೆ ನಿಷೇಧಿಸಿದೆ. ಈ ಕುರಿತು ಪ್ರವೇಶ ನಿರ್ಬಂಧದ ನಾಮಫಲಕ ಹಾಕಲಾಗಿದೆ. ಸಹಜವಾಗಿಯೇ … Continued

ಜೇನು ಹುಳುಗಳ ದಾಳಿಯಿಂದ 30ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯ : ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ ನೋಡಲು ತೆರಳಿದ್ದ ಪ್ರವಾಸಿಗರ ಮೇಲೆ ಜೇನು ದಾಳಿ ಮಾಡಿ 30ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡ ಹಿನ್ನೆಲೆಯಲ್ಲಿ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಏಪ್ರಿಲ್‌ 14ರಿಂದ ನಿರ್ಬಂಧ ವಿಧಿಸಲಾಗಿದೆ. ಕಳೆದೆರಡು ದಿನಗಳಿಂದ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬಂದ 30ಕ್ಕೂ ಹೆಚ್ಚು ಪ್ರವಾಸಿಗರ ಮೇಲೆ … Continued

ಬನವಾಸಿ: ಬಿಜೆಪಿ ತೊರೆದು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ…!

ಬನವಾಸಿ (ಶಿರಸಿ): ಯಲ್ಲಾಪುರ ಕ್ಷೇತ್ರದ ಯುವ ಮುಖಂಡ ಹಾಗೂ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ ವಿವೇಕ ಹೆಬ್ಬಾರ ಇಂದು, ಗುರುವಾರ ಅಧಿಕೃತವಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಟ್ಟಣದ ಟಿ‌.ಎಂ.ಎಸ್ ಎದುರು ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಅವರು ವಿವೇಕ ಹೆಬ್ಬಾರ್ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟ  ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. … Continued

ಯಲ್ಲಾಪುರ: ತೋಟಕ್ಕೆ ಬಂದ ಕಾಡಾನೆ ಸಾವು

ಯಲ್ಲಾಪುರ: ತೋಟಕ್ಕೆ ಬಂದ ಕಾಡಾನೆಯೊಂದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕಟ್ಟಿಗೆಯ ಇಡಕೆಮನೆ ಬಳಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಇಡಕೆಮನೆಯ ಪರಮೇಶ್ವರ ರಾಮಾ ಕುಣಬಿ ಅವರ ತೋಟಕ್ಕೆ ಕಾಡಾನೆ ಬಂದಿತ್ತು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಆನೆ ಮೃತಪಟ್ಟಿದೆ ಎನ್ನಲಾಗಿದೆ. ಆಹಾರ … Continued

ರಾಜ್ಯಸಭೆ ಚುನಾವಣೆ | ನನಗೆ ಅನಾರೋಗ್ಯ ಇದ್ದ ಕಾರಣ ಮತದಾನ ಮಾಡ್ಲಿಕ್ಕೆ ಆಗ್ಲಿಲ್ಲ ; ಶಿವರಾಮ ಹೆಬ್ಬಾರ

ಯಲ್ಲಾಪುರ: ‘ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆಸ್ಪತ್ರೆಯಲ್ಲಿ‌ ಚಿಕಿತ್ಸೆಗೆಂದು ದಾಖಲಾಗಿದ್ದೆ, ಮತದಾನ ಮಾಡಲು ಆಗದೇ ಇರುವುದಕ್ಕೆ ನನಗೆ ಬೇಸರವಿದೆ. ಮಂಗಳವಾರ ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಅವರು ಮಧ್ಯಾಹ್ನದ ಒಳಗೆ … Continued