ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೊನಾ ಪಾಸಿಟಿವ್‌: ಮಣಿಪಾಲ್‌ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ತಪಾಸಣೆಗೆ ಹಾಜರಾಗಿದ್ದರು. ಅಲ್ಲಿ ನಿಗದಿಯಂತೆ ಅವರಿಗೆ ಕೊರೋನಾ ಪರೀಕ್ಷೆಗೆ ಒಳಪಡಿಸಲಾಯಿತು. ಆಗ … Continued

ಹಣಕಾಸು ಇಲಾಖೆ ಅಧಿಕಾರಿಗಳೇ ಸಿಎಂ ಯಡಿಯೂರಪ್ಪಗೆ ಟೋಪಿ ಹಾಕಿದ್ದಾರೆ: ಎಚ್‌.ವಿಶ್ವನಾಥ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ ಬಜೆಟ್‌ನಲ್ಲಿ ಏನೂ ಹೊಸತನವಿಲ್ಲ, ಹಣಕಾಸು ಇಲಾಖೆ ಅಧಿಕಾರಿಗಳೇ ಮುಖ್ಯಮಂತ್ರಿಗೆ ಟೋಪಿ ಹಾಕಿದ್ದಾರೆ ಎಂದು ಬಿಜೆಪಿ ಮುಖಂಡ ಎಚ್‌.ವಿಶ್ವನಾಥ ಹೇಳಿದರು. ಕಳೆದ ೧೦ ವರ್ಷಗಳ ಬಜೆಟ್‌ ನೋಡಿದ್ದೇನೆ. ಇದರಲ್ಲಿ ಏನೂ ಹೊಸ ಯೋಜನೆಗಳಿಲ್ಲ. ಅಂಕಿ-ಅಂಶಗಳನ್ನು ತಿರುಗು-ಮುರುಗು ಮಾಡಿದ್ದಾರೆ. ಹಣಕಾಸು ಖಾತೆ ನಿಭಾಯಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಹಲವು ಬಾರಿ ಬಜೆಟ್‌ … Continued

ರಾಮಮಂದಿರ ಕುರಿತು ಸಿದ್ದು ಹೇಳಿಕೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧ: ಸಿಎಂ ಯಡಿಯೂರಪ್ಪ

ರಾಮಮಂದಿರ ನಿರ್ಮಾಣ ಕುರಿತು ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ ಹೇಳಿಕೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿದ್ದು, ನ್ಯಾಯಾಲಯ ಅವರ ಮೇಲೆ ಕ್ರಮ ಜರುಗಿಸುವ ಸಾಧ್ಯತೆಯಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಹಿಂದೂಗಳು, ಮುಸಲ್ಮಾನರು ಹಾಗೂ ಕ್ರೈಸ್ತರು ಎಲ್ಲ ಧರ್ಮದವರು ರಾಮಮಂದಿರ ನಿರ್ಮಾಣಕ್ಕೆ ಉದಾರವಾಗಿ ದೇಣಿಗೆ ನೀಡುತ್ತಿದ್ದಾರೆ. ಇದನ್ನು ಸಹಿಸದೇ ಕೆಲವರು ಅನಗತ್ಯ ಟೀಕೆ … Continued