ಪೋಕ್ಸೋ ಪ್ರಕರಣ: ಸಿಐಡಿ ಮುಂದೆ ವಿಚಾರಣೆಗೆ ಹಾಜರಾದ ಯಡಿಯೂರಪ್ಪ

ಬೆಂಗಳೂರು :ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೋಮವಾರ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣ ದಾಖಲಾಗಿ ಮೂರು ತಿಂಗಳಾಗಿದ್ದು, ಅವರು ಎರಡನೇ ಬಾರಿಗೆ ವಿಚಾರಣೆ ಎದುರಿಸುತ್ತಿದ್ದಾರೆ. ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್, ಡಿವೈಎಸ್‌ಪಿ ತನಿಖಾಧಿಕಾರಿಯಿಂದ ಯಡಿಯೂರಪ್ಪ ವಿಚಾರಣೆ ನಡೆದಿದೆ. ಸಿಐಡಿ ಅಧಿಕಾರಿಗಳು ಈ ಮೊದಲೇ ಯಡಿಯೂರಪ್ಪ ಅವರ … Continued

ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ದೊಡ್ಡ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಯಡಿಯೂರಪ್ಪ ಅವರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ, 2012 (ಪೋಕ್ಸೊ ಕಾಯ್ದೆ) ಅಡಿಯಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಅವರ ಬಂಧನಕ್ಕೆ ತಡೆ ನೀಡಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ … Continued

ಯಡಿಯೂರಪ್ಪ ವಿರುದ್ಧ ಪೋಕ್ಸೋ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. 17 ವರ್ಷದ ತಮ್ಮ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಮಾರ್ಚ್‌ 14ರಂದು ಯಡಿಯೂರಪ್ಪ … Continued

ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿಯೂ ಆಗಿರುವ ಗುರುದತ್ತ ಹೆಗಡೆಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ಜಯಲಕ್ಷ್ಮಿ, ಮಾಜಿ ಸಚಿವ ಗೂಳಿಹಟ್ಟಿ ಶೇಖರ, ಮಾಜಿ ಪಾಲಿಕೆ ಸದಸ್ಯ ವಿಶ್ವಾದ … Continued

ರಾಜ್ಯ ಬಿಜೆಪಿಯಲ್ಲಿ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು : ರೇಣುಕಾಚಾರ್ಯ

ದಾವಣಗೆರೆ : ರಾಜ್ಯ ಬಿಜೆಪಿಯಲ್ಲಿ ಕೆಲವರ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಏನಾದರೂ ಮಾತನಾಡಿದರೆ ಪಕ್ಷ ವಿರೋಧಿ ಹೇಳಿಕೆಯಾಗುತ್ತದೆ. ಆದರೆ ಕೆಲವರು ಮಾತನಾಡಿದರೆ ಪಕ್ಷ ಸಂಘಟನೆಯ ವಿಚಾರವಾಗುತ್ತದೆ. ವಿಧಾನ ಪರಿಷತ್‌ ಸದಸ್ಯ ಸ್ಥಾನ, ರಾಜ್ಯ ಸಭೆ ಸೀಟು ಎಲ್ಲವೂ ಅವರು ಹೇಳಿದವರಿಗೆ … Continued

ಕಮಲ-ಜೆಡಿಎಸ್‌ ಮೈತ್ರಿ ಬೆನ್ನಲ್ಲೇ ಯಡಿಯೂರಪ್ಪ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್ ಪಕ್ಷವು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ಬೆನ್ನಲ್ಲೇ ನಿಖಿಲ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ನಗರದ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ ಅವರು, ಯಡಿಯೂರಪ್ಪ ಅವರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಗೌರವಿಸಿದರು. ಆರ್.ಆರ್ ನಗರ ಶಾಸಕ ಮುನಿರತ್ನ ನಿಖಿಲಗೆ ಜೊತೆಗೆ ಆಗಮಿಸಿದ್ದರು. ಯಡಿಯೂರಪ್ಪ ಭೇಟಿ ಬಳಿಕ … Continued

ಪಕ್ಷಕ್ಕೆ ದ್ರೋಹ ಮಾಡಿದ ಶೆಟ್ಟರ ಅವರನ್ನು ಯಾರೂ ಕ್ಷಮಿಸುವುದಿಲ್ಲ : ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು: ಬಿಜೆಪಿ (BJP) ಪಕ್ಷಕ್ಕೆ ದ್ರೋಹ ಮಾಡಿದ ಜಗದೀಶ್ ಶೆಟ್ಟರ ಅವರನ್ನು ಯಾರು ಕ್ಷಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಶೆಟ್ಟರ್ ರಾಜೀನಾಮೆ ನಂತರ ಮಧ್ಯಾಹ್ನ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶೆಟ್ಟರ ಜನಸಂಘದಿಂದಲೂ ಬಿಜೆಪಿ ಜೊತೆಗಿದ್ದರು. ಶೆಟ್ಟರ್ ಅವರನ್ನು ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ, ಮಂತ್ರಿ, … Continued

ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ರಾತ್ರಿ ಬಿಡುಗಡೆಯಾಗಬಹುದು, ಜಗದೀಶ್ ಶೆಟ್ಟರಗೆ ಟಿಕೆಟ್‌ ಸಿಗಬಹುದು : ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ನಿನ್ನೆ 189 ಸ್ಥಾನಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 125 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. “ನಿನ್ನೆ ಘೋಷಣೆಯಾದ 189 ಸ್ಥಾನಗಳಲ್ಲಿ 52 ಹೊಸ ಮುಖಗಳನ್ನು ಆಯ್ಕೆ ಮಾಡಲಾಗಿದೆ. ನಿನ್ನೆ … Continued

ಕರ್ನಾಟಕ ವಿಧಾನಸಭಾ ಚುನಾವಣೆ | ಇಂದು 170-180 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ : ಯಡಿಯೂರಪ್ಪ

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ತನ್ನ 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು, ಸೋಮವಾರ (ಎಪ್ರಿಲ್‌ 10) ಸಂಜೆ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಇಂದು, ಸೋಮವಾರ ಸಂಜೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮಾಜಿ … Continued

ನಾಳೆಯಿಂದ ಸಿಎಂ ಬೊಮ್ಮಾಯಿ-ಯಡಿಯೂರಪ್ಪ ಎರಡು ದಿನಗಳ ದೆಹಲಿ ಪ್ರವಾಸ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನಾಳೆ ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಉಭಯ ನಾಯಕರ ಭೇಟಿ ಕುತೂಹಲ ಮೂಡಿಸಿದೆ. ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ಸೋಮವಾರ ಹಾಗೂ ಮಂಗಳವಾರ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿಯಿಂದ ಹಾಗೂ ಯಡಿಯೂರಪ್ಪ ಬೆಂಗಳೂರಿನಿಂದ … Continued