ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ : ಸಿಎಂ ಯೋಗಿ ಆದಿತ್ಯನಾಥಗೆ ತನಿಖಾ ವರದಿ ಹಸ್ತಾಂತರಿಸಿದ ಎಸ್‌ಐಟಿ

 ಲಕ್ನೋ/ಅಯೋಧ್ಯೆ : ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರಕ್ಕೆ ಕೋಟ್ಯಂತರ ರೂಪಾಯಿ ಮೌಲ್ಯದ ದೇಣಿಗೆ ಹರಿದುಬರುತ್ತಿರುವ ಬೆನ್ನಲ್ಲೇ, ಕಾಣಿಕೆ ಹಣ ಮತ್ತು ಆಭರಣಗಳ ನಿರ್ವಹಣೆಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಈ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT)ವು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು … Continued

ರಸ್ತೆಗಳಲ್ಲಿ ನಮಾಜ್‌ ಮಾಡ್ಬೇಡಿ, ಜಾಗದ ಕೊರತೆಯಿದ್ರೆ ಪಾಳಿಯಲ್ಲಿ ನಮಾಜ್‌ ಮಾಡಿ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ

ಲಕ್ನೋ: ರಸ್ತೆಗಳ ಮೇಲೆ ನಮಾಜ್ ಮಾಡುವ ಪದ್ಧತಿಯ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಇದಕ್ಕಾಗಿ ಸಂಚಾರವನ್ನು ನಿರ್ಬಂಧಿಸುವುದಕ್ಕೆ ತಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಅವರು ಒತ್ತಿಹೇಳಿದ್ದಾರೆ. ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಉತ್ತರ ಪ್ರದೇಶ ಆಡಳಿತವು ಮೊದಲಿಗೆ ಮನವೊಲಿಕೆಯ ಮೂಲಕ ನಿಯಮ … Continued

ಮೂಡ್ ಆಫ್ ದಿ ನೇಷನ್ ಸರ್ವೆ | ಮೋದಿ ಜನಪ್ರಿಯತೆ ಸ್ಥಿರ-ನಂಬರ್‌ 1 ; ರಾಹುಲ್‌ ಗಾಂಧಿ 2ನೇ ಸ್ಥಾನದಲ್ಲಿ ; ಇಬ್ಬರ ನಡುವಿನ ಅಂತರ…?

ನರೇಂದ್ರ ಮೋದಿ ಅವರು ಭಾರತದ ಚುಕ್ಕಾಣಿ ಹಿಡಿದ 11 ವರ್ಷಗಳಲ್ಲಿ ಪ್ರತಿಕೂಲ ಪರಿಸ್ಥಿತಿಗಳಿದ್ದರೂ ಜನಪ್ರಿಯತೆಯಲ್ಲಿ ಯಾವಾಗಲೂ ಉತ್ತಮ ನಾಯಕರಾಗಿ ಹೊರಹೊಮ್ಮಿದ್ದಾರೆ. ಈಗ ಅವರ ಮೂರನೇ ಅವಧಿಯ ಎರಡನೇ ವರ್ಷದಲ್ಲಿ ಕಠಿಣ ಸವಾಲನ್ನು ಎದುರಿಸುತ್ತಿದ್ದಾರೆ. ಮುಖ್ಯವಾಗಿ ಅಮೆರಿಕ ವಿಧಿಸಿದ ಸುಂಕದಿಂದ ಈ ಸವಾಲು ಎದುರಾಗಿದೆ. ಟ್ರಂಪ್ ಭಾರತದ ರಫ್ತಿನ ಮೇಲೆ 50 ಪ್ರತಿಶತ ಸುಂಕವನ್ನು ವಿಧಿಸಿದ್ದು, ಇದು … Continued

ಪತಿ ಹತ್ಯೆ ಪ್ರಕರಣದಲ್ಲಿ ನ್ಯಾಯ ಕೊಡಿಸಿದ್ದಕ್ಕಾಗಿ ಸಿಎಂ ಯೋಗಿಗೆ ಧನ್ಯವಾದ ಹೇಳಿದ ಶಾಸಕಿಗೆ ಸಮಾಜವಾದಿ ಪಕ್ಷದಿಂದಲೇ ಗೇಟ್‌ಪಾಸ್‌…!

ನವದೆಹಲಿ: ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕಿ ಪೂಜಾ ಪಾಲ್ ಅವರನ್ನು ವಿಭಿನ್ನ ಕಾರಣಕ್ಕೆ ಪಕ್ಷದಿಂದ ಉಚ್ಚಾಟಿಸಲಾಗಿದೆ. ತಮ್ಮ ಪತಿಯ ಕೊಲೆ ಪ್ರಕರಣದಲ್ಲಿ “ನ್ಯಾಯ ಒದಗಿಸಿದ್ದಕ್ಕಾಗಿ” ಹಾಗೂ ಅಪರಾಧಿಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಜಾರಿಗೆ ತಂದಿದ್ದಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಧನ್ಯವಾದ ಅರ್ಪಿಸಿ ಶ್ಲಾಘಿಸಿದ ಶಾಸಕಿ ಪೂಜಾ ಪಾಲ್ ಅವರನ್ನು ಗಂಟೆಗಳ … Continued

ಪ್ರಧಾನಿ ಮೋದಿ, ಮೋಹನ ಭಾಗವತ್ ಹೆಸರು ಹೇಳಿದ್ರೆ ನಿಮಗೆ ಹೊಡೆಯುವುದಿಲ್ಲ ಎಂದಿದ್ರು ; ಮಾಲೇಗಾಂವ್ ಪ್ರಕರಣದ ಬಗ್ಗೆ ಪ್ರಜ್ಞಾ ಠಾಕೂರ್

ನವದೆಹಲಿ: 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಶನಿವಾರ, ತನಿಖಾ ಅಧಿಕಾರಿಗಳು ತನಿಖೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ,, ಇಂದ್ರೇಶಕುಮಾರ ಮತ್ತು ಇತರರ ಹೆಸರುಗಳನ್ನು ಹೇಳುವಂತೆ ಒತ್ತಡ ಹೇರಿದ್ದರು ಮತ್ತು … Continued

ಮಹಾಕುಂಭ 2025 : ಈವರೆಗೆ 62 ಕೋಟಿ ಭಕ್ತರ ಆಗಮನ

ಆಗ್ರಾ : ಮಹಾಕುಂಭ ಮೇಳ 2025 ಮುಕ್ತಾಯಗೊಳ್ಳುವ ಮೂರು ದಿನಗಳ ಮೊದಲು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಹಾಕುಂಭಕ್ಕೆ ಈವರೆಗೆ 62 ಕೋಟಿ ಭಕ್ತರು ಆಗಮಿಸಿದ್ದಾರೆ ಎಂದು ಭಾನುವಾರ ತಿಳಿಸಿದ್ದಾರೆ. ಮತ್ತು ನಿರ್ದಿಷ್ಟ ಅವಧಿಯಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಜನರು ಸೇರಿದ್ದು “ಶತಮಾನದ ಅಪರೂಪದ ಘಟನೆಗಳಲ್ಲಿ ಒಂದಾಗಿದೆ” ಎಂದು ಹೇಳಿದ್ದಾರೆ. ಆಗ್ರಾದಲ್ಲಿ ನಡೆದ … Continued

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥಗೆ ಕೊಲೆ ಬೆದರಿಕೆ ; ಬಾಂಗ್ಲಾದೇಶದ ವಲಸಿಗನ ಬಂಧನ

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಶಿರಚ್ಛೇದ ಮಾಡುವುದಾಗಿ ವೀಡಿಯೊ ಮೂಲಕ ಬಹಿರಂಗವಾಗಿ ಬೆದರಿಕೆ ಹಾಕಿದ ಬಾಂಗ್ಲಾದೇಶದ ವಲಸಿಗ ಶೇಖ್ ಅತಾಲ್ ಎಂಬಾತನನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಆಯುಧವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿಯು ಯೋಗಿ ಆದಿತ್ಯನಾಥ ಅವರನ್ನು ಕೊಲ್ಲುವ ಬಗ್ಗೆ ಮಾತನಾಡುತ್ತಿರುವುದು ಮತ್ತು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿರುವುದು … Continued

ರಝಾಕಾರರು ಹಚ್ಚಿದ ಬೆಂಕಿಯಿಂದ ನಿಮ್ಮ ಕುಟುಂಬ ಸುಟ್ಟು ಹೋಗಿದ್ದನ್ನು ಮರೆಯಬೇಡಿ ; ಮಲ್ಲಿಕಾರ್ಜುನ ಖರ್ಗೆಗೆ ನೆನಪಿಸಿದ ಯೋಗಿ

ಮುಂಬೈ: ಕಾಂಗ್ರೆಸ್‌ನ ಓಲೈಕೆ ರಾಜಕಾರಣದ ಮಾಡುತ್ತಿದೆ ಎಂದು ಆರೋಪಿಸಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮತ ಓಲೈಕೆಗಾಗಿ ತಮ್ಮ ಕುಟುಂಬದ ತ್ಯಾಗವನ್ನು ಕಾಂಗ್ರೆಸ್ ಅಧ್ಯಕ್ಷರು ಮರೆತಿದ್ದಾರೆ ಎಂದು ಮಂಗಳವಾರ ಹೇಳಿದ್ದಾರೆ. ಖರ್ಗೆಯವರ ಬಾಲ್ಯದ ದುರಂತದ ಬಗ್ಗೆ ಪ್ರಸ್ತಾಪಿಸಿದ ಯೋಗಿ ಆದಿತ್ಯನಾಥ, 1948 ರಲ್ಲಿ … Continued

ಸಿಎಂ ಯೋಗಿ ಆದಿತ್ಯನಾಥಗೆ ಕೊಲೆ ಬೆದರಿಕೆ ; ಥಾಣೆಯ ಐಟಿ ಪದವಿ ಪಡೆದ ಯುವತಿ ಬಂಧನ…

ಮುಂಬೈ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಜೀವ ಬೆದರಿಕೆ ಸಂದೇಶ ರವಾನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಯುವತಿಯೊಬ್ಬರನ್ನು ಬಂಧಿಸಲಾಗಿದೆ. ಮುಂಬೈ ಪೊಲೀಸರು ಫಾತಿಮಾ ಖಾನ್ ಎಂಬವರ ಮೊಬೈಲ್‌ ನಂಬರ್‌ನಿಂದ ಸಂದೇಶ ಕಳುಹಿಸಿರುವುದು ತನಿಖೆಯಿಂದ ಬೆಳಕಿಗೆ ಬಂದ ನಂತರ ಅವರನ್ನು ಬಂಧಿಸಿದ್ದಾರೆ. 10 ದಿನಗಳೊಳಗೆ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯದಿದ್ದರೆ ‘ಬಾಬಾ ಸಿದ್ದಿಕಿ ಅವರಂತೆ … Continued

ರಾಜೀನಾಮೆ ನೀಡಿ ಇಲ್ಲವೇ ಬಾಬಾ ಸಿದ್ದಿಕಿಯಂತೆ ಕೊಲ್ಲುತ್ತೇನೆ ; ಯೋಗಿ ಆದಿತ್ಯನಾಥಗೆ ಜೀವ ಬೆದರಿಕೆ

ಮುಂಬೈ : ಮುಂಬೈ ಪೊಲೀಸರಿಗೆ ಶನಿವಾರ ಸಂಜೆ ಬೆದರಿಕೆ ಸಂದೇಶವೊಂದು ಬಂದಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರಂತೆಯೇ ಕೊಲ್ಲಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಶನಿವಾರ ಸಂಜೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ. ಸಂದೇಶವನ್ನು … Continued