ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಸೇರಿ ನಾಲ್ವರು ಮತ್ತೆ ಪೊಲೀಸ್‌ ಕಸ್ಟಡಿಗೆ ; ಪವಿತ್ರಾಗೆ ನ್ಯಾಯಾಂಗ ಬಂಧನ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಆರೋಪಿ ನಟ ದರ್ಶನ್‌ ಸೇರಿ ನಾಲ್ಕು ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಮತ್ತೆ ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ. ಉಳಿದ 11 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಆರೋಪಿಗಳ ಕಸ್ಟಡಿ ಅವಧಿ ಗುರುವಾರ (ಜೂನ್ 20) ಮುಕ್ತಾಯವಾದ ಹಿನ್ನೆಲೆಯಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರು ಬೆಂಗಳೂರಿನ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಿಶ್ವನಾಥ ಚನ್ನಬಸಪ್ಪ ಗೌಡರ ಅವರ ಮುಂದೆ ಆರೋಪಿಗಳನ್ನು ಹಾಜರುಪಡಿಸಿದರು.
ಘಟನೆಯ ಮಾಹಿತಿ ಪಡೆದ ಮ್ಯಾಜಿಸ್ಟ್ರೇಟ್‌ ಅವರು ನಟ ದರ್ಶನ್‌, ವಿನಯ್‌, ಪ್ರದೂಷ, ಧನರಾಜ ಅವರನ್ನು ಜೂನ್‌ 22ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿದ್ದಾರೆ.

ಆರೋಪಿಗಳಾದ ಪವಿತ್ರಾ ಗೌಡ, ರಾಘವೇಂದ್ರ, ನಾಗರಾಜ, ಲಕ್ಷ್ಮಣ, ಪವನ್‌, ರಾಘವೇಂದ್ರ, ನಂದೀಶ, ಜಗದೀಶ, ಅನುಕುಮಾರ್‌, ಕೇಶವಮೂರ್ತಿ, ನಿಖಿಲ್‌ ನಾಯಕ್‌ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಇವರ ಮೇಲೆ ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 201 (ಸಾಕ್ಷ್ಯ ನಾಶ), 120 (ಬಿ) (ಕ್ರಿಮಿನಲ್‌ ಪಿತೂರಿ), 364 (ಅಪಹರಣ), 355 (ಕ್ರಿಮಿನಲ್‌ ಉದ್ದೇಶದಿಂದ), 384 (ಸುಲಿಗೆ), 143 (ಅಕ್ರಮ ಕೂಟ), 147 (ದೊಂಬಿ), 148 (ಮಾರಕಾಸ್ಟ್ರ ಬಳಕೆ) ಜೊತೆಗೆ 149 (ಏಕೈಕ ಉದ್ದೇಶದಿಂದ ಎಲ್ಲರೂ ಒಟ್ಟುಗೂಡಿ ಕೃತ್ಯ ಎಸಗಿರುವುದು) ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement