ನನ್ನ ತಾಯಿ ಕೊರೊನಾದಿಂದ ಗಂಭೀರ ಸ್ಥಿತಿಯಲ್ಲಿದ್ದಾರೆ..ಆಸ್ಪತ್ರೆಗಳು ಬೆಡ್ ಇಲ್ಲ ಎನ್ನುತ್ತಿವೆ; ಕಾಂಗ್ರೆಸ್‌ ಸಭೆಯಲ್ಲಿ ಕಣ್ಣೀರಿಟ್ಟ ಶಾಸಕಿ

ಬೆಂಗಳೂರು: ಕೊರೊನಾ ಸೋಂಕಿನಿಂದ ಜನಪ್ರತಿನಿಧಿಗಳೇ ತಮ್ಮ ಕುಟುಂಬ ಸದಸ್ಯರಿಗೆ ಆಸ್ಪತ್ರೆಗಳಲ್ಲಿ ಬೆಡ್ ಒದಗಿಸಲಾಗದೇ ಕಣ್ಣೀರು ಹಾಕುತ್ತಿದ್ದಾರೆ. ತನ್ನ ತಾಯಿ ಕೊರೊನಾ ಸೋಂಕಿನಿಂದ ಪರದಾಡುತ್ತಿದ್ದಾರೆ. ಯಾವುದೇ ಆಸ್ಪತ್ರೆಗಳಿಗೆ ಕೇಳಿದರೂ ಬೆಡ್ ಇಲ್ಲ ಎಂದು ಹೇಳುತ್ತಿದ್ದಾರೆ. ಏನು ಮಾಡಬೇಕೆಂದೇ ತೋಚುತ್ತಿಲ್ಲ ಎಂದು ಧಾರವಾಡ ಜಿಲ್ಲೆಯ ಕುಂದಗೋಳ ಮತಕ್ಷೇತ್ರದ ಕಾಂಗ್ರೆಸ್ ಶಾಸಕಿ ಕುಸುಮಾ ಶಿವಳ್ಳಿ ಕಣ್ಣೀರು ಹಾಕಿರುವ ಘಟನೆ ನಡೆದಿದೆ.
ಸೋಮವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ವರ್ಚ್ಯುಲ್‌ ಸಭೆಯಲ್ಲಿ ಕುಂದಗೋಳ ಶಾಸಕಿ ಕುಸುಮಾ ಶಿವಳ್ಳಿ, ನನ್ನ ತಾಯಿ ಕೊರೊನಾ ಸೋಂಕಿನಿಂದ ಗಂಭೀರವಾಗಿದ್ದಾರೆ. ಆದರೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೋದರೆ ಅಲ್ಲಿ ದಾಖಲಿಸಿಕೊಳ್ಳುತ್ತಿಲ್ಲ. ನನಗೆ ತುಂಬಾ ಆತಂಕವಾಗುತ್ತಿದೆ ಎಂದು ಕಣ್ಣೀರು ಹಾಕಿದ್ದಾರೆ.
ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶಾಸಕಿಗೆ ಧೈರ್ಯ ತುಂಬಿದ್ದು, ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲು ನಾವು ಸೂಚಿಸುತ್ತೇವೆ, ನೀವು ಗಾಬರಿಯಾಗಬೇಡಿ ಎಂದು ಧೈರ್ಯ ಹೇಳಿದ್ದಾರೆ. ಸಿದ್ದರಾಮಯ್ಯ ತಕ್ಷಣವೇ ಕಿಮ್ಸ್ ನಿರ್ದೇಶಕರಿಗೆ ಕರೆ ಮಾಡಿ ಆಸ್ಪತ್ರೆಯಲ್ಲಿ ಯಾವುದೇ ರೋಗಿಗೂ ಬೆಡ್ ಇಲ್ಲ ಎಂದು ಕಳುಹಿಸುವಂತಿಲ್ಲ. ಸೋಂಕಿತರನ್ನು ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಿ ಎಂದು ತಾಕೀತು ಮಾಡಿದ್ದಾರೆ.
ರಾಜಕಾರಣಿಗಳ ಪರಿಸ್ಥಿತಿಯೇ ಹೀಗಾದರೆ ಇನ್ನು ಕೊರೊನಾ ಸೋಂಕಿಗೊಳಗಾದ ಸಾಮಾನ್ಯ ಜನರ ಪಾಡೇನು ಎಂಬುದು ಜನತೆ ಪ್ರಶ್ನೆ.

ಪ್ರಮುಖ ಸುದ್ದಿ :-   ಜಗತ್ತಿಗೆ ಹೇಳುವ ಮೊದಲೇ ಪಾಕಿಸ್ತಾನಕ್ಕೆ ತಿಳಿಸಿದ್ದೆ ; ಬಾಲಾಕೋಟ್ ಸ್ಟ್ರೈಕ್ ಬಗ್ಗೆ ಬಿಚ್ಚಿಟ್ಟ ಪ್ರಧಾನಿ ಮೋದಿ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement