ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದನ್ನು ಪರಿಗಣಿಸಿ ಉತ್ತರ ಕನ್ನಡ ಜಿಲ್ಲೆಯ ಎಂಟು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂನ್ 17ರಂದು ರಜೆ ಘೋಷಿಸಲಾಗಿದೆ.
ಜೂನ್ 17ರವರೆಗೆ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜೂನ್ 17ರಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ರಜಾ ಅವಧಿಯ ಪಠ್ಯವನ್ನು ಮುಂದಿನ ದಿನದಲ್ಲಿ ಹೊಂದಾಣಿಕೆ ಮಾಡಿಕೊಂಡು ಪಾಠ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ