ಗಣೇಶನ ಹಬ್ಬ : ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

ಬೆಳಗಾವಿ: ಗಣೇಶ ಚತುರ್ಥಿ ಅಂಗವಾಗಿ ಪ್ರಯಾಣಿಕರ ದಟ್ಟಣೆ ತಪ್ಪಿಸಲು ಯಶವಂತಪುರದಿಂದ ಬೆಳಗಾವಿ ಮತ್ತು ಬೆಳಗಾವಿಯಿಂದ ಯಶವಂತಪುರದ ವರೆಗೆ ಎರಡು ದಿನಗಳ ಕಾಲ ವಿಶೇಷ ರೈಲು ಚಲಿಸಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಈ ಕುರಿತು ಶನಿವಾರ (ಸೆ.9) ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಯಶವಂತಪುರ-ಬೆಳಗಾವಿ ರೈಲು (07389) ಸೆಪ್ಟೆಂಬರ್‌ 15 ರ ಸಂಜೆ 6:15 ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು ಸೆಪ್ಟೆಂಬರ್‌ 16ರ ಬೆಳಗ್ಗೆ 6 ಕ್ಕೆ ಬೆಳಗಾವಿ ತಲುಪಲಿದೆ.
ಹಾಗೂ ಬೆಳಗಾವಿ-ಯಶವಂತಪುರ ರೈಲು (07390) ಸೆಪ್ಟೆಂಬರ್‌ 16ರ ಸಂಜೆ 5:30 ಕ್ಕೆ ಬೆಳಗಾವಿಯಿಂದ ಹೊರಟು 17ರ ಬೆಳಗ್ಗೆ 04:30 ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ ಎಂದು ಅವರು ತಿಳಿಸಿದ್ದಾರೆ.
ಯಶವಂತಪುರ-ಬೆಳಗಾವಿ ರೈಲು (07391) ಸೆಪ್ಟೆಂಬರ್‌ 17 ರ ಸಂಜೆ 6:15 ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು 18ರ ಬೆಳಗ್ಗೆ 6ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ. ಅಂತೆಯೇ ಬೆಳಗಾವಿ-ಯಶವಂತಪುರ ರೈಲು (07392) ಸೆಪ್ಟೆಂಬರ್‌ 18ರ ಸಂಜೆ 5:30 ಕ್ಕೆ ಬೆಳಗಾವಿಯಿಂದ ಹೊರಟು ಸೆಪ್ಟೆಂಬರ್‌ 19 ರ ಬೆಳಗ್ಗೆ 04:30 ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಈರಣ್ಣ ಕಡಾಡಿ ವಿನಂತಿಸಿದ್ದಾರೆ.
ಮನವಿಗೆ ಸ್ಪಂದಿಸಿ ಶೀಘ್ರ ರೈಲಿನ ವ್ಯವಸ್ಥೆ ಮಾಡಿದ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಪ್ರಚೋದನಾಕಾರಿ ವೀಡಿಯೊ : ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ನಡ್ಡಾ, ವಿಜಯೇಂದ್ರಗೆ ಪೊಲೀಸ್‌ ನೋಟಿಸ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement