ಪಶ್ಚಿಮ ಬಂಗಾಳಕ್ಕೆ ಕೊರೊನಾ ಲಸಿಕೆ ನೀಡುವಂತೆ ಪ್ರಧಾನಿಗೆ ಸಿಎಂ ಮಮತಾ ಮನವಿ

ವಿಧಾನಸಭೆ ಚುನಾವಣೆಗೆ ಮುಂಚೆ ಪಶ್ಚಿಮ ಬಂಗಾಳದಲ್ಲಿ ಕೊರೊನಾ ಲಸಿಕೆ ಒದಗಿಸಬೇಕೆಂದು ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಎಪ್ರಿಲ್‌-ಮೇ ತಿಂಗಳಿನಲ್ಲಿ ನಡೆಯುವ ಚುನಾವಣೆಯಲ್ಲಿ ಜನರು ಲಸಿಕೆಯಿಲ್ಲದೇ ಮತದಾನ ಕೇಂದ್ರಗಳಿಗೆ ಹೋಗಬೇಕಾಗುತ್ತದೆ. ಜನರ ಆರೋಗ್ಯ ಮತ್ತು ಯೋಗಕ್ಷೇಮದ ಹಿತದೃಷ್ಟಿಯಿಂದ ತಕ್ಷಣವೇ ಜನರಿಗೆ ಲಸಿಕೆ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.
ಆರೋಗ್ಯ ಕಾರ್ಯಕರ್ತರು ಮತ್ತು ಇತರ ಮುಂಚೂಣಿ ಕಾರ್ಮಿಕರಿಗೆ ಮೊದಲು ಲಸಿಕೆ ಹಾಕುವ ಮೂಲಕ ಕೋವಿಡ್ -19 ಇನಾಕ್ಯುಲೇಷನ್ ಕಾರ್ಯಕ್ರಮವು ಸರಿಯಾದ ಶ್ರದ್ಧೆಯಿಂದ ಪ್ರಾರಂಭವಾಗಿದೆ ಎಂದು ಹೇಳಿದ ಅವರು, ಪಶ್ಚಿಮ ಬಂಗಾಳದಲ್ಲಿ ತುರ್ತು ಆಧಾರದ ಮೇಲೆ ಪ್ರತಿಯೊಬ್ಬ ಸರ್ಕಾರಿ ಉದ್ಯೋಗಿಗಳನ್ನು ತಲುಪುವುದು ಅಷ್ಟೇ ಮುಖ್ಯವಾಗಿದೆ. ಲಸಿಕೆ ಒದಗಿಸಿ ಚುನಾವಣೆಯನ್ನು ಸುರಕ್ಷಿತಗೊಳಿಸಿ ಎಂದು ವಿನಂತಿಸಿದ್ದಾರೆ.
ಮಾರ್ಚ್ 1 ರಿಂದ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್ -19 ಲಸಿಕೆಗಳನ್ನು ನೀಡಲಾಗುತ್ತದೆ ಎಂದು ಸರ್ಕಾರ ಘೋಷಿಸಿದ ಮರುದಿನ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ.
ಕಳೆದ ತಿಂಗಳು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ತಮ್ಮ ಸರ್ಕಾರವು ಲಸಿಕೆಯನ್ನು ರಾಜ್ಯದ ಎಲ್ಲ ಜನರಿಗೆ ಉಚಿತವಾಗಿ ನೀಡಲಿದೆ ಎಂದು ಘೋಷಿಸಿದ್ದರು. ಲಸಿಕೆ ಹಾಕುವುದನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವುದಿಲ್ಲ. ಬಂಗಾಳದ ಜನರು ಸಾಧ್ಯವಾದಷ್ಟು ಬೇಗ ಲಸಿಕೆಗಳನ್ನು ಉಚಿತವಾಗಿ ಪಡೆಯಬೇಕು ಇದರ ಆರ್ಥಿಕ ಹೊಣೆಯನ್ನು ಹೊರಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಅವರು ಸಿಎಂ ಮಮತಾ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಶಿರಸಿ: ಕಸ್ತೂರಿರಂಗನ್ ವರದಿಯಿಂದ ಉತ್ತರ ಕನ್ನಡ ಜಿಲ್ಲೆಯ 567 ಹಳ್ಳಿಗಳನ್ನು ಕೈಬಿಡಲು ಒತ್ತಾಯಿಸಿ ಸಹಸ್ರಾರು ಆಕ್ಷೇಪಣಾ ಪತ್ರ ಸಲ್ಲಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement