ಹೊಸ ವರ್ಷಕ್ಕೆ ಸರ್ಕಾರದಿಂದ 62 ಐಪಿಎಸ್‌ ಅಧಿಕಾರಿಗಳಿಗೆ ಬಡ್ತಿ

ಬೆಂಗಳೂರು: ರಾಜ್ಯ ಸರ್ಕಾರ (Karnataka Government) ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್​ಪಿಗಳಿಗೆ ಬಡ್ತಿ ನೀಡಿದೆ. ಇತ್ತೀಚೆಗಷ್ಟೆ ಏಳು ಐಪಿಎಸ್ (IPS transfer)​ ಅಧಿಕಾರಿಗಳ ವರ್ಗಾವಣೆ ಮಾಡಿದ್ದ ಸರ್ಕಾರ ಮತ್ತೆ ಹಲವರಿಗೆ ಬಡ್ತಿ ನೀಡಿ ಮಂಗಳವಾರ ಆದೇಶ ಹೊರಡಿಸಿದೆ.
ಹೊಸ ವರ್ಷಕ್ಕೆ ರಾಜ್ಯ ಸರ್ಕಾರ 62 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಮಹತ್ವದ ಆದೇಶ ಹೊರಡಿಸಿದೆ. 2025 ರ ಜನವರಿ 1 ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ 62 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ಮುಂಬಡ್ತಿ ಪಡೆದ ಅಧಿಕಾರಿಗಳ ಪೈಕಿ ನಾಲ್ವರ ಸ್ಥಾನಗಳ ಬದಲಾಗಿದ್ದು, ಇನ್ನುಳಿದವರಿಗೆ ವೇತನ ಶ್ರೇಣಿ ಉನ್ನತೀಕರಿಸಿ ಅದೇ ಹುದ್ದೆಯಲ್ಲಿ ಮುಂದುವರೆಸಲಾಗಿದೆ.
ಯಾವೆಲ್ಲ ಐಪಿಎಸ್ ಅಧಿಕಾರಿಗಳಿಗೆ ಬಡ್ತಿ 
ರಮಣ ಗುಪ್ತಾ: ಹೆಚ್ಚುವರಿ ಪೊಲೀಸ್ ಆಯುಕ್ತ, ಗುಪ್ತಚರ ವಿಭಾಗ
ಚೇತನ್ ಸಿಂಗ್ ರಾಥೋಡ್: ಐಜಿಪಿ, ಈಶಾನ್ಯ ವಲಯ (ಬೆಳಗಾವಿ)
ವಿಕಾಸ್ ಕುಮಾರ್: ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಪಶ್ಚಿಮ
ಅಮಿತ್ ಸಿಂಗ್: ಐಜಿಪಿ, ಪಶ್ಚಿಮ ವಲಯ(ಮಂಗಳೂರು)
ವಂಶಿಕೃಷ್ಣ: ಡಿಐಜಿ, ಪೊಲೀಸ್ ನೇಮಕಾತಿ ವಿಭಾಗ, ಬೆಂಗಳೂರು
ಕಾರ್ತಿಕ್ ರೆಡ್ಡಿ: ರಾಮನಗರ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮುಂದುವರಿಕೆ
ಕುಲದೀಪ್ ಕುಮಾರ್ ಜೈನ್: ಡಿಐಜಿ, ಆಡಳಿತ ವಿಭಾಗದ ಜಂಟಿ ಪೊಲೀಸ್ ಆಯುಕ್ತ
ಸಂತೋಷ್ ಬಾಬು: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ
ಇಶಾ ಪಂತ್: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ
ಜಿ.ಸಂಗೀತಾ: ಡಿಐಜಿ, ಸಿಐಡಿ ಅರಣ್ಯ ಘಟಕ
ಸೀಮಾ ಲಾಟ್ಕರ್: ಡಿಐಜಿ, ಮೈಸೂರು ಕಮಿಷನರ್ ಆಗಿ ಮುಂದುವರಿಕೆ
ರೇಣುಕಾ ಕೆ.ಸುಕುಮಾರ್: ಡಿಐಜಿಯಾಗಿ ಬಡ್ತಿ, ಡಿಸಿಆರ್​ಇ, ಬೆಂಗಳೂರು
ಡಾ.ಭೀಮಾಶಂಕರ ಗುಳೇದ್: ಬೆಳಗಾವಿ ಎಸ್​ಪಿಯಾಗಿ ಮುಂದುವರಿಕೆ ಮಾಡಲಾಗಿದೆ.
ಎನ್​ ಶಶಿ ಕುಮಾರ್: ಪೊಲೀಸ್ ಮಹಾನಿರೀಕ್ಷಕರಾಗಿ ಬಡ್ತಿ, ಹುಬ್ಬಳ್ಳಿ-ಧಾರವಾಡ ನಗರ
ಡಾ.ವೈ.ಎಸ್. ರವಿ ಕುಮಾರ್: ಇನ್‌ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್​ ಆಗಿ ಬಡ್ತಿ (ಇಂಟಲಿಜೆನ್ಸ್), ಬೆಂಗಳೂರು

ಪ್ರಮುಖ ಸುದ್ದಿ :-   ಸವದತ್ತಿ | ಸಿಡಿಲು ಬಡಿದು ಇಬ್ಬರು ಸಾವು

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement