ಬಿಜೆಪಿ ಅಧ್ಯಕ್ಷ ನಡ್ಡಾ ವಿರುದ್ಧ ಶಿಗ್ಗಾವಿಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ಸಾರ್ವಜನಿಕ ಹೇಳಿಕೆ ನೀಡುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ ಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ.
ಚುನಾವಣಾ ಪ್ರಚಾರದ ವೇಳೆ ನಡ್ಡಾ ಅವರು “ಬಿಜೆಪಿಗೆ ಮತ ನೀಡಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದಿಂದ ಕರ್ನಾಟಕವು ವಂಚಿತವಾಗದಂತೆ ನೋಡಿಕೊಳ್ಳಿ” ಎಂದು ಸಾರ್ವಜನಿಕ ಹೇಳಿಕೆ ನೀಡುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಆರೋಪಿಸಿ ಹಾವೇರಿ ಜಿಲ್ಲೆಯ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಮ್ಮ ವಿರುದ್ಧದ ಎಫ್‌ಐಆರ್‌ ಮತ್ತು ಹಾವೇರಿ ಪ್ರಧಾನ ಸಿವಿಲ್‌ ನ್ಯಾಯಾಲಯದ ಮುಂದಿರುವ ವಿಚಾರಣೆ ಪ್ರಕ್ರಿಯೆ ರದ್ದುಪಡಿಸಲು ಕೋರಿ ಜೆ ಪಿ ನಡ್ಡಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.
ನಡ್ಡಾ ಅವರನ್ನು ಪ್ರತಿನಿಧಿಸಿದ್ದ ವಕೀಲ ಎಂ ವಿನೋದಕುಮಾರ, “ಚುನಾವಣಾ ಸಮಾವೇಶದಲ್ಲಿ ಭಾಷಣವನ್ನು ಪರಿಶೀಲಿಸಿದರೆಇದರಲ್ಲಿ ಪ್ರಭಾವ ಬೀರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಯಾವುದೇ ತಿರುಳಿಲ್ಲ” ಎಂದರು. ಆಗ ಪೀಠವು ಮೌಖಿಕವಾಗಿ ಭಾಷಣ ಮತ್ತು ಪ್ರಕರಣದಲ್ಲಿ ಏನೂ ಇಲ್ಲ ಎಂದು ಎಫ್‌ಐಆರ್‌ ವಜಾ ಮಾಡಿತು.

ಪ್ರಮುಖ ಸುದ್ದಿ :-   ವಾಯುಭಾರ ಕುಸಿತ : ಕರ್ನಾಟಕದಲ್ಲಿ ಮೇ 24ರ ವರೆಗೆ ಭಾರಿ ಮಳೆ ಮುನ್ನೆಚ್ಚರಿಕೆ ; 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಪ್ರಕರಣದ ಹಿನ್ನೆಲೆ…
ಕಳೆದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2023ರ ಏಪ್ರಿಲ್‌ 19ರಂದು ಮಧ್ಯಾಹ್ನ 1:15ರಿಂದ 1:50ರ ಅವಧಿಯಲ್ಲಿ ಶಿಗ್ಗಾವಿ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದ ಜೆ.ಪಿ. ನಡ್ಡಾ ಅ, “ಕರ್ನಾಟಕದ ಜನತೆ ಬಿಜೆಪಿಗೆ ಮತ ನೀಡಿ, ಪ್ರಧಾನಿ ನರೇಂದ್ರ ಮೋದಿಯವರ ಒಲವು ಗಳಿಸಿರಿ. ಕರ್ನಾಟಕವು ಮೋದಿಯವರ ಆಶೀರ್ವಾದ ಹೊಂದಿದೆ. ಅದರಿಂದ ವಂಚಿತವಾಗದಂತೆ ನೋಡಿಕೊಳ್ಳಿ” ಎಂದು ಭಾಷಣ ಮಾಡಿದ್ದರು. ಈ ಬಗ್ಗೆ ಚುನಾವಣಾಧಿಕಾರಿ ಶಿಗ್ಗಾವಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜೆ ಪಿ ನಡ್ಡಾ ಅವರು ಮತದಾರರ ಮೇಲೆ ಅನುಚಿತ ಪ್ರಭಾವ ಬೀರಿ ಅಪರಾಧ ಎಸಗಿದ್ದಾರೆ ಎಂದು ಆರೋಪಿಸಿದ್ದರು. ನಂತರ ನಡ್ಡಾ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 171(ಸಿ), 171(ಎಫ್) ಮತ್ತು ಜನಪ್ರತಿನಿಧಿಗಳ ಕಾಯಿದೆಯ ಸೆಕ್ಷನ್‌ 123(2) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement