ಕಾರು-ಟಿಪ್ಪರ್ ಲಾರಿ ಡಿಕ್ಕಿ : ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಹಾಸನ : ಟಿಪ್ಪರ್ ವಾಹನ ಡಿಕ್ಕಿಯಾಗಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ ದುರ್ಘಟನೆ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಕುಪ್ಪಳ್ಳಿ ಗ್ರಾಮದ ಚೇತನ, ಗುಡ್ಡೇನಹಳ್ಳಿ ಗ್ರಾಮದ ಅಶೋಕ, ತಟ್ಟೆಕೆರೆ ಗ್ರಾಮದ ಪುರುಷೋತ್ತಮ ಹಾಗೂ ಆಲೂರು ತಾಲೂಕು ಚಿಗಳೂರು ಗ್ರಾಮದ ದಿನೇಶ ಎಂದು ಹೇಳಲಾಗಿದೆ.
ಇನ್ನೋವಾ ಕಾರಿನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಹಾಸನ ಕಡೆಯಿಂದ ಆಗಮಿಸುತ್ತಿದ್ದ ಟಿಪ್ಪರ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆಲೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

ನಿಮ್ಮ ಕಾಮೆಂಟ್ ಬರೆಯಿರಿ

advertisement