ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಓಪನ್: ೫,೦೦೦ ಜನರಿಗಷ್ಟೇ ಪ್ರವೇಶಕ್ಕೆ ಅವಕಾಶ

ತಿರುವನಂತಪುರ: ತಿಂಗಳದ ಐದು ದಿನಗಳ ಪೂಜೆಗಾಗಿ ಶನಿವಾರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಮುಕ್ತಗೊಂಡಿದೆ. ಆನ್ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ ೫,೦೦೦ ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ.

ದೇವಾಲಯ ಆವರಣದಲ್ಲಿ ಭಕ್ತರ ನಡವಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತ್ಯೇಕ ಮಾರ್ಗಸೂಚಿ ನೀಡಿದ್ದು, ದೇಗುಲ ಆವರಣದಲ್ಲಿ ಕಡ್ಡಾಯ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸೂಕ್ತ ಕೋವಿಡ್ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಜುಲೈ ೧೭ ರಿಂದ ೨೧ ರವರೆಗೆ ಮಾಸಿಕ ವಿಧಿವಿಧಾನಗಳಿಗಾಗಿ ದೇವಾಲಯ ಬಾಗಿಲು ತೆರೆಯಲಾಗಿದೆ. ಮಾಸಿಕ ಆಚರಣೆಗಳಿಗಾಗಿ ದೇವಾಲಯವನ್ನು ತಿಂಗಳ ಕೆಲ ನಿರ್ದಿಷ್ಟ ದಿನಗಳಲ್ಲಿ ತೆರೆದರೂ ಕೋವಿಡ್-೧೯ ನಿರ್ಬಂಧಗಳಿಂದಾಗಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರಲಿಲ್ಲ. ಲಾಕ್ಡೌನ್ ಅವಧಿಯಲ್ಲಿ ತನ್ನ ಅಧೀನದಲ್ಲಿರುವ ೧,೨೦೦ ದೇವಾಲಯಗಳಿಗೆ ಭಕ್ತರು ಪ್ರವೇಶಿಸದಂತೆ ತಿರುವಾಂಕೂರು ದೇವಸ್ವಂ ಬೋರ್ಡ್ (ಟಿಡಿಬಿ) ನಿರ್ಬಂಧ ವಿಧಿಸಿತ್ತು.

ಧಾರ್ಮಿಕ ವಿಧಿವಿಧಾನಗಳಿಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಂಡಿರುವ ಟಿಡಿಬಿ ಶನಿವಾರದಿಂದ ಆರಂಭವಾಗುವ ಮಾಸಿಕ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸುವ ಭಕ್ತರಿಗೆ ಅಯ್ಯಪ್ಪ ದೇಗುಲದಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಿದೆ.

ಪ್ರಮುಖ ಸುದ್ದಿ :-   ನಿಮ್ಮವನಾಗಿದ್ದೆ...ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

ಆನ್ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ ೫,೦೦೦ ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ. ಎಲ್ಲ ಭಕ್ತಾದಿಗಳು ಕಡ್ಡಾಯವಾಗಿ ೪೮ ಗಂಟೆಗಳ ಹಿಂದೆ ನೀಡಿದ ನೆಗೆಟಿವ್ ಆರ್.ಟಿ.ಪಿ.ಸಿ.ಆರ್. ಕೋವಿಡ್-೧೯ ಪರೀಕ್ಷಾ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಮಾಸಿಕ ಧಾರ್ಮಿಕ ಆಚರಣೆಗಳ ಬಳಿಕ ಈ ತಿಂಗಳ ೨೧ರಂದು ದೇವಾಲಯ ಮತ್ತೆ ಮುಚ್ಚಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement