ಹಳಿಯಾಳ: ಹೆಂಡತಿ ಕೊಂದು ಬ್ಯಾರಲ್‌ನಲ್ಲಿ ಮುಚ್ಚಿಟ್ಟಿದ್ದ ಪತಿರಾಯ…!

ಹಳಿಯಾಳ: ಹೆಂಡತಿಯನ್ನ ಕೊಲೆ ಮಾಡಿ ನೀರಿನ ಖಾಲಿ ಬ್ಯಾರಲ್‌ನಲ್ಲಿ ಬಚ್ಚಿಟ್ಟಿದ್ದ ಗಂಡನನ್ನ ಹಳಿಯಾಳ ಹಾಗೂ ರಾಮನಗರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ತೆರಗಾಂವ ಗ್ರಾಮದ ತುಕಾರಾಮ ಮಡಿವಾಳ ತನ್ನ ಹೆಂಡತಿ ಶಾಂತಕುಮಾರಿ ಮಡಿವಾಳ (38) ಎಂಬವರನ್ನು ಕತ್ತುಹಿಸುಕಿ ಕೊಂದಿದ್ದಾನೆ. ಬೇರೆ ಹೆಣ್ಣು ಮಕ್ಕಳೊಂದಿಗೆ ಮಾತನಾಡುತ್ತಾನೆಂದು ಶಾಂತಕುಮಾರಿ ತುಕಾರಾಮನ ಮೇಲೆ ಸಂಶಯ ವ್ಯಕ್ತಪಡಿಸಿದ್ದಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದು, ಅದು ವಿಕೋಪಕ್ಕೆ ಹೋಗಿ ಕೊನೆಗೆ ಅದು ಪತ್ನಿಯ ಕೊಲೆಯಲ್ಲಿ ಕೊನೆಗೊಂಡಿದೆ.
ಕೊಲೆಯನ್ನ ಮುಚ್ಚಿ ಹಾಕುವ ಉದ್ದೇಶದಿಂದ ಮೃತ ದೇಹವನ್ನು ತುಕಾರಾಮ ಖಾಲಿ ಬ್ಯಾರಲ್‌ನಲ್ಲಿ ಬಚ್ಚಿಟ್ಟಿದ್ದ. ಖಾನಾಪುರ ಮೂಲದ ರಿಜ್ವಾನ್ ಕುಂಬಾರಿ ಎಂಬುವವರ ಟಾಟಾ ಏಸ್ ವಾಹನವನ್ನು ಬಾಡಿಗೆ ಪಡೆದು ಚಾಲಕ ರಿಜ್ವಾನ್ ಮತ್ತು ಅಳ್ನಾವರ ಮೂಲದ ಸಮೀರ್ ಪಂತೋಜಿ ಹಾಗೂ ತುಕಾರಾಮ ಸೇರಿ ರಾಮನಗರದ ಕಾಡಿನಲ್ಲಿ ಮೃತದೇಹವನ್ನು ಎಸೆಯಲು ಮುಂದಾಗಿದ್ದರು. ಈ ವೇಳೆ ಹಳಿಯಾಳ ಮತ್ತು ರಾಮನಗರದ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತುಕಾರಾಮನನ್ನ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಉಳಿದಿಬ್ಬರನ್ನೂ ಬಂಧಿಸಲಾಗಿದೆ.

ಪ್ರಮುಖ ಸುದ್ದಿ :-   ಜಾತ್ರಾ ಮಹೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಇಬ್ಬರು ಸಾವು

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement