ವೀಡಿಯೊ…| ತಿಪಟೂರು : ಧೈರ್ಯ ಅಂದ್ರೆ ಇದಪ್ಪ…ಓಡಿ ಹೋಗುತ್ತಿದ್ದ ಚಿರತೆ ಬಾಲ ಹಿಡಿದೆಳೆದು ಬೋನಿಗೆ ಹಾಕಿದ ಯುವಕ…!

ತುಮಕೂರು: ಅರಣ್ಯ ಇಲಾಖೆ ಸಿಬ್ಬಂದಿಗಳ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಚಿರತೆಯನ್ನು ಯುವಕನೊಬ್ಬ ಅದರ ಬಾಲದಿಂದ ಹಿಡಿದು ಬೋನಿಗೆ ಹಾಕಿರುವ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಆನಂದ ಎಂಬ ಯುವಕ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕನಾಗಿದ್ದಾನೆ. ಚಿರತೆಯೊಂದು ಹಲವು ದಿನಗಳಿಂದ ರಂಗಾಪುರ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಅದನ್ನು ಸೆರೆ ಹಿಡಿಯಲು ಸತತ ಪ್ರಯತ್ನ ನಡೆದಿತ್ತು. ಈ ನಡುವೆ ಪುರಲೇಹಳ್ಳಿ ರಸ್ತೆಯಲ್ಲಿರುವ ಕುಮಾರ ಎಂಬವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ (Forest Department) ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬಿಟ್ಟು ಚಿರತೆ ಸೆರೆಹಿಡಿಯುವ ಸಲುವಾಗಿ ಸಕಲ ಸಲಕರಣೆಗಳೊಂದಿಗೆ ಆಗಮಿಸಿದ್ದರು. ಅರಣ್ಯ ಇಲಾಖೆಯವರು ಬಲೆ ಹಾಕಿ ಚಿರತೆ ಸೆರೆಹಿಡಿಯಲು ಮುಂದಾದರು. ಆದರೆ ಚಿರತೆ ಅವರ ಬಲೆಗೆ ಬೀಳಿಲ್ಲ. ಈ ವೇಳೆ ಅಲ್ಲಿಗೆ ಬಂದ ಯುವಕ ಆನಂದ ಧೈರ್ಯ ಮಾಡಿ ಚಿರತೆ ಬಾಲ ಹಿಡಿದು ಎಳೆದು ಅದನ್ನು ಬೋನಿಗೆ ಹಾಕಿದ್ದಾನೆ. ಯುವಕನನ್ನು ನೋಡುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿಯೇ ಒಂದು ಸಲ ಶಾಕ್‌ ಆಗಿದ್ದಾರೆ. ಆತನ ಧೈರ್ಯಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement