ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರ ಭ್ರಷ್ಟಾಚಾರದ ಆರೋಪದ ಬಗ್ಗೆ ಪ್ರಾಥಮಿಕ ತನಿಖೆ ಆರಂಭಿಸುವಂತೆ ಮುಂಬೈ ಹೈಕೋರ್ಟ್ ಸೋಮವಾರ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ನಿರ್ದೇಶನ ನೀಡಿದೆ.
ಇದರಿಂದ ಅನಿಲ ದೇಶ್ಮುಖ್ಗೆ ರಾಜಕೀಯವಾಗಿ ಹಿನ್ನಡೆಯಾಗಿದೆ. ದೇಶ್ಮುಖ್ ವಿರುದ್ಧ “ತಕ್ಷಣದ ಮತ್ತು ಪಕ್ಷಪಾತವಿಲ್ಲದ” ತನಿಖೆ ಕೋರಿ ಪರಮ್ ಬೀರ್ ಸಿಂಗ್ ಹೈಕೋರ್ಟಿಗೆ ತೆರಳಿದ್ದರು, ಅವರು ಪೊಲೀಸ್ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ಪೊಲೀಸ್ ಅಧಿಕಾರಿ ಸಚಿನ್ ವಾಝೆ ಅವರನ್ನು ಬಾರ್ ಮತ್ತು ರೆಸ್ಟೋರೆಂಟ್ಗಳಿಂದ ತಿಂಗಳಿಗೆ 100 ಕೋಟಿ ಸಂಗ್ರಹಿಸಲು ಒತ್ತಡ ಹೇರಿದ್ದರು ಎಂದು ಪರಮ್ ಬೀರ್ ಸಿಂಗ್ ಅವರು ತಮ್ಮನ್ನು ಮುಂಬೈ ಪೊಲೀಸ್ ಆಯುಕ್ತರ ಸ್ಥಾನದಿಂದ ವರ್ಗಾವಣೆ ಮಾಡಿದ ನಂತರ ಆಪಾದಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು.
ಈ ವರ್ಷದ ಫೆಬ್ರವರಿಯಲ್ಲಿ ವಾಝೆಸೇರಿದಂತೆ ಹಲವಾರು ಮುಂಬೈ ಪೊಲೀಸ್ ಅಧಿಕಾರಿಗಳೊಂದಿಗೆ ದೇಶ್ಮುಖ್ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದರು ಎಂದು ಪರಮ್ ಬೀರ್ ಸಿಂಗ್ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಭೆಗಳಲ್ಲಿ ದೇಶ್ಮುಖ್ ಅವರು ವಿವಿಧ ಸಂಸ್ಥೆಗಳಿಂದ ತಿಂಗಳಿಗೆ 100 ಕೋಟಿ ರೂ. ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು
ದೇಶ್ಮುಖ್ ನಿಯಮಿತವಾಗಿ ಪೊಲೀಸರ ಕಾರ್ಯಚಟುವಟಿಕೆಯಲ್ಲಿ ಹಸ್ತಕ್ಷೇಪ ಮಾಡುತ್ತಾರೆ ಮತ್ತು ಆಗಾಗ್ಗೆ ತಮ್ಮ ಕಚೇರಿಯನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂದು ದೇಶ್ಮುಖ್ ಅವರ ನಡವಳಿಕೆಯು ಕೇಂದ್ರೀಯ ತನಿಖಾ ದಳ (ಸಿಬಿಐ) ಯಿಂದ ತನಿಖೆ ಸಮರ್ಥಿಸುತ್ತದೆ ಎಂದು ಹೈಕೋರ್ಟಿಗೆ ಸಲ್ಲಿಸಿದ ಅರ್ಜಿಯಲ್ಲಿ ಪರಮ್ ಬೀರ್ ಸಿಂಗ್ ಹೇಳಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ