ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮುಂಡೂಡಿದ ಹೈಕೋರ್ಟ್‌

ಬೆಂಗಳೂರು : ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಗುರುವಾರ ಮುಂದೂಡಿದೆ.
ಹೈಕೋರ್ಟ್‌ನಲ್ಲಿ ಗುರುವಾರ ನಾಗಪ್ರಸನ್ನ ಅವರ ಏಕ ಸದಸ್ಯರ ಪೀಠ ಅರ್ಜಿ ವಿಚಾರಣೆ ನಡೆಸಿತು. ವಾದ ಆಲಿಸಿದ ಪೀಠ ವಿಚಾರಣೆಯನ್ನು ಆಗಸ್ಟ್‌ 31 ಕ್ಕೆ ಮುಂದೂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ವಾದ ಆರಂಭಿಸಿದ ಹಿರಿಯ ವಕೀಲ ಅಭಿಷೇಕ ಮನು ಸಿಂಘ್ವಿ , ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಕೇಳಿಬಂದ ಆರೋಪಗಳಿಗೆ ರಾಜ್ಯಪಾಲರು ಯಾವುದೇ ಶೋಕಾಸ್‌ ನೋಟಿಸ್‌ ನೀಡದೆ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ ಎಂದು ವಾದಿಸಿದರು.

ಅಲ್ಲದೆ, ರಾಜ್ಯಪಾಲರು ಸಚಿವ ಸಂಪುಟ ಸಭೆಯ ಸಲಹೆಯನ್ನೂ ಕೇಳದೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ತರಾತುರಿಯಲ್ಲಿ ಅನುಮತಿ ಕೊಟ್ಟಿದ್ದಾರೆ. ಆದ್ದರಿಂದ ರಾಜ್ಯಪಾಲರ ಅನುಮತಿಯನ್ನು ರದ್ದು ಪಡಿಸಬೇಕು ಎಂದು ವಾದಿಸಿದರು. ರಾಜ್ಯಪಾಲರ ಪರವಾಗಿ ಆಕ್ಷೇಪಣೆ ಸಲ್ಲಿಕೆಯಾಗಿಲ್ಲ. ಅವರ ಆಕ್ಷೇಪಣೆಗೆ ನಾನು ಪ್ರತ್ಯುತ್ತರ ಸಲ್ಲಿಸಬೇಕಿದೆ ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ರಾಜ್ಯಪಾಲರ ವಕೀಲ ತುಷಾರ್‌ ಮೆಹ್ತಾ, ಅರ್ಜಿದಾರರು ಎಲ್ಲಾ ದಾಖಲೆ ಸಲ್ಲಿಸಿದ್ದಾರೆ. ಸಿಂಘ್ವಿ ಅವರ ವಾದ ಆಲಿಸಿ, ಅಗತ್ಯಬಿದ್ದರೆ ರಾಜ್ಯಪಾಲರು ನಿರ್ಧಾರ ಮಾಡಿರುವ ಕಡತವನ್ನು ನ್ಯಾಯಾಯಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

ಪ್ರಮುಖ ಸುದ್ದಿ :-   ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement