ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ ಬಿಜೆಪಿಗೆ ಸೇರ್ಪಡೆ

ಬೆಂಗಳೂರು : ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ ಇಂಡುವಾಳು ಸಚ್ಚಿದಾನಂದ ಅವರು ಇಂದು ಸೋಮವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಸಚ್ಚಿದಾನಂದ ಅವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಅವರಲ್ಲದೆ ನಾಗಮಂಗಲ ರವಿ, ಶ್ರೀ ರಂಗ ಪಟ್ಟಣ ಲಿಂಗಾರಾಜು ಬಿಜೆಪಿಗೆ ಸೇರ್ಪಡೆಯಾದರು ಈ ವೇಳೆ ಪಕ್ಷದ ಬಾವುಟ ಹಾಗೂ ಶಾಲು ಹೊದಿಸಿ ಸಚಿವರಾದ ಸಿ.ಎನ್.ಅಶ್ವತ್ಥ ನಾರಾಯಣ, ನಾರಾಯಣಗೌಡ, ಗೋಪಾಲಯ್ಯ ಮತ್ತು ಸಿ.ಪಿ.ಯೋಗೀಶ್ವರ, ಬಿಜೆಪಿ ಉಪಾಧ್ಯಕ್ಷ ನಿರ್ಮಲಕುಮಾರ ಸುರಾನಾ ಪಕ್ಷಕ್ಕೆ ಬರಮಾಡಿಕೊಂಡರು.
.ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಸಚ್ಚಿದಾನಂದ ಅವರು, ಪ್ರಧಾನಿ ನರೇಂದ್ರ ಮೋದಿಯ ನಾಯಕತ್ವವನ್ನು ಒಪ್ಪಿ ನಾನು ಬಿಜೆಪಿ ಸೇರಿದ್ದೇನೆ. ಮುಂದೆ ವಿಧಾನಸಭೆಗೆ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳುಹಿಸಿ ಕೊಡುತ್ತೇವೆ ಎಂದರು.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement