ಮಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಜಾರಿಯಾಗಿ ತಿಂಗಳು ಕಳೆದಿದೆ. ಇದೀಗ ವಾರಾಂತ್ಯದ ದಿನಗಳಲ್ಲಿ ಮಹಿಳೆಯರು ಗುಂಪು ಗುಂಪಾಗಿ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ, ದೇವರ ದರ್ಶನ ಪಡೆಯುತ್ತಿದ್ದಾರೆ. ಈಗ ವಾಯವ್ಯ ಕರ್ನಾಟಕ ಸಾರಿಗೆ ಬಸ್ನಲ್ಲಿ ಮಹಿಳೆಯರು ಬಟ್ಟೆ ಒಣಗಲು ಹಾಕಿದ ವಿಡಿಯೋ ಭಾರೀ ವೈರಲ್ ಆಗುತ್ತಿದೆ.
ನಾಡಿನ ಸುಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕಾರವಾರ ನಡುವೆ ಸಂಚರಿಸುತ್ತಿದ್ದ ಬಸ್ನ ಕಿಟಕಿಗಳಿಗೆ ಮಹಿಳೆಯರು ಬಟ್ಟೆಗಳನ್ನು ಒಣಗಲು ಹಾಕಿದ್ದಾರೆ. ಇದು ಸಾರ್ವಜನಿಕವಾಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಬಸ್ಸಿನಲ್ಲಿ ಪ್ರಯಾಣಿಕರಿಗೆ ಬಟ್ಟೆಗಳು ನೇತಾಡುತ್ತಿದ್ದು, ಇದು ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕಿರಿಕಿರಿಯಾಗಿದೆ. ಬಸ್ಸಿನಲ್ಲಿ ಒಣ ಹಾಕಿದ ಬಟ್ಟೆಯ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ