ಮದುವೆಗೆ ಹುಡುಗಿ ನೋಡಿಕೊಂಡು ಬರುತ್ತಿದ್ದ ಯುವಕ ಮಳೆನೀರಿಗೆ ಕೊಚ್ಚಿಹೋದ

ಗದಗ: ಮದುವೆಯಾಗಲು ಹುಡುಗಿ ನೋಡಿಕೊಂಡು ವಾಪಸ್​ ಬರುತ್ತಿದ್ದಾಗ ಯುವಕನೊಬ್ಬ ಮಾರ್ಗಮಧ್ಯೆ ಹಳ್ಳದ ನೀರಲ್ಲಿ ಕೊಚ್ಚಿಕೊಂಡು ಹೋಗಿ ಸಾವಿಗೀಡಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಯಕಲಾಸಪುರ ಗ್ರಾಮದಲ್ಲಿ ನಡೆದಿದೆ.
ಟಿಪ್ಪು ಸುಲ್ತಾನ್ (26) ಮೃತ ದುರ್ದೈವಿ. ಗುರುವಾರ ಕನ್ಯೆ ನೋಡಲು ಉಪ್ಪಿನ ಬೆಟಗೇರಿಗೆ ಹೋಗಿದ್ದ ಯುವಕ ಸಂಜೆ ವಾಪಸ್​ ಊರಿಗೆ ಹಿಂತಿರುಗುತ್ತಿದ್ದ ಎಂದು ಹೇಳಲಾಗಿದೆ.
ಈ ವೇಳೆ ಹಳ್ಳದ ನೀರಲ್ಲಿ ಕೊಚ್ಚಿಹೋಗಿ ಮುಳ್ಳಿನ ಕಂಟಿಯಲ್ಲಿ ಸಿಲುಕಿದ್ದ ಟಿಪ್ಪು ಸುಲ್ತಾನ್ ಮೃತದೇಹವನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಹೊರ ತೆಗೆದಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

ನಿಮ್ಮ ಕಾಮೆಂಟ್ ಬರೆಯಿರಿ

advertisement