ಕರ್ನಾಟಕದಲ್ಲಿ ಸೋಮವಾರ ಹೊಸದಾಗಿ 673 ಜನರಿಗೆ ಕೊರೊನಾ ಸೋಂಕು 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ..!

ಬೆಂಗಳೂರು: ರಾಜ್ಯದಲ್ಲಿ ಇಂದು (ಸೋಮವಾರ) ಹೊಸದಾಗಿ 673 ಜನರಿಗೆ ಸೋಂಕು ದೃಢಪಟ್ಟಿದೆ.ಇದೇ ಸಮಯದಲ್ಲಿ 13 ಜನ ಸೋಂಕಿತರು ಮೃತಪಟ್ಟಿದ್ದಾರೆ.
ರಾಜಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,62,408 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದೇ ಸಮಯದಲ್ಲಿ 1074 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ 29,08,622 ಜನ ಗುಣಮುಖರಾಗಿದ್ದಾರೆ.ಒಟ್ಟು 37,517 ಜನ ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ 16,241 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಒಂದೇ ದಿನ 1,19,014 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 0.56 ರಷ್ಟಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ 214 ಜನರಿಗೆ ಸೋಂಕು ತಗುಲಿದ್ದು, 371 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಮೂವರು ಸೋಂಕಿತರು ಮೃತಪಟ್ಟಿದ್ದಾರೆ ಹಾಗೂ 7211 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಸೋಂಕಿತರ ಮಾಹಿತಿ:
ಬಾಗಲಕೋಟೆ -0, ಬೆಳಗಾವಿ -0, ಬೀದರ್ -0, ಧಾರವಾಡ- 0, ಗದಗ- 0, ಹಾವೇರಿ -0, ಕಲಬುರಗಿ -0, ರಾಯಚೂರು -0, ವಿಜಯಪುರ -0, ಯಾದಗಿರಿ -0 ಈ ಹತ್ತು ಜಿಲ್ಲೆಗಳಲ್ಲಿ ಒಂದೂ ಪ್ರಕರಣ ವರದಿಯಾಗಿಲ್ಲ.

ಸಂಪೂರ್ಣ ಜಲ್ಲಾವಾರು ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಎಚ್.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ

13-09-2021 HMB Kannada

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement