ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

ಬೆಂಗಳೂರು: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಏಪ್ರಿಲ್ 1 ರಂದು ಹಾಸನದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಗೌಡ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ಇತ್ತೀಚೆಗೆ ಅವರು ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯವನ್ನು ಫ್ಲ್ಯಾಗ್ ಮಾಡಿದ ನಂತರ ಅದು ಬೆಳಕಿಗೆ ಬಂದಿದೆ.

ಮೂಲಗಳ ಪ್ರಕಾರ, ಮೂಲಗಳ ಪ್ರಕಾರ, ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ ಹಾಗೂ ಹಾಸನ ಪೊಲೀಸರು ಗ್ರಾಮಾಂತರ ಠಾಣೆ ಪೊಲೀಸರಿಗೆ ನೀಡಿದ ಮಾಹಿತಿ ಮೇರೆಗೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಅವರನ್ನು ಈಗ ಹಾಸನಕ್ಕೆ ಕರೆದೊಯ್ಯಲಾಗುತ್ತದೆ.
ಪ್ರಜ್ವಲ್ ರೇವಣ್ಣ ಅವರು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದ ದೇವರಾಜೇಗೌಡರು, ಹಾಸನದಿಂದ ಜೆಡಿಎಸ್ ಸಂಸದರಿಗೆ ಲೋಕಸಭೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದರು.

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

2023ರ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ತಂದೆ ಹೆಚ್ ಡಿ ರೇವಣ್ಣ ವಿರುದ್ಧ ಸ್ಪರ್ಧಿಸಿದ್ದ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳದ ವೀಡಿಯೊಗಳನ್ನು ಸೋರಿಕೆ ಮಾಡಿದ್ದರ ಹಿಂದೆ ರಾಜ್ಯದ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಆರೋಪಿಸಿದ್ದರು.
ಹಾಸನ ಜಿಲ್ಲೆಯ 36 ವರ್ಷದ ಮಹಿಳೆಯೊಬ್ಬರು ತಮ್ಮ ಆಸ್ತಿ ಮಾರಾಟಕ್ಕೆ ಸಹಾಯ ಮಾಡುವ ನೆಪದಲ್ಲಿ ದೇವರಾಜೇಗೌಡ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಇದಲ್ಲದೆ, ಮಹಿಳೆಯ ಪತಿ ಕೂಡ ದೇವರಾಜೇಗೌಡರು ತಮ್ಮ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಮತ್ತು ನಿಂದಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement