ಟ್ರಾಫಿಕ್ ಜಾಮ್ ನಿಂದ ಬೇಸತ್ತ ವ್ಯಕ್ತಿಯೊಬ್ಬ ಮಹಿಂದ್ರಾ ಥಾರ್ ಅನ್ನು ನದಿಯಲ್ಲಿ ಓಡಿಸಿದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ವೈರಲ್ ಆದ ನಂತರ ಪೊಲೀಸರು ಆತನಿಗೆ ಶಾಕ್ ನೀಡಿದ್ದಾರೆ..!
ಹಿಮಾಚಲ ಪ್ರದೇಶದಲ್ಲಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿರುವುದನ್ನು ನೋಡಿದ ಕಾರ್ ಚಾಲಕ ಟ್ರಾಫಿಕ್ನಲ್ಲಿ ಸಿಕ್ಕಾಕಿಕೊಂಡರೆ ಸಮಯ ವ್ಯರ್ಥವಾಗುತ್ತದೆ ಎಂದು ಭಾವಿಸಿ ಮಹಿಂದ್ರಾ ಥಾರ್ ಅನ್ನು ನದಿಯಲ್ಲಿ ಚಲಾಯಿಸಿಕೊಂಡು ಹೋಗಿದ್ದಾನೆ. ಇದರ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.
ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಗುಡ್ಡಗಾಡು ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ಪಾರಾಗಲು ಚಾಲಕ ತನ್ನ ಮಹಿಂದ್ರಾ ಥಾರ್ ಅನ್ನು ಹಿಮಾಚಲ ಪ್ರದೇಶದ ಚಂದ್ರ ನದಿಯಲ್ಲಿ ಓಡಿಸಿದ್ದಾನೆ. ಈ ರೀತಿ ನದಿಯಲ್ಲಿ ಕಾರು ಚಾಲನೆ ಮಾಡುವುದು ಅಪಾಯಕಾರಿಯಾಗಿದೆ. ಆದ್ದರಿಂದ ಪೊಲೀಸರು ಚಾಲಕನ ವಿರುದ್ಧ ಕ್ರಮಕೈಗೊಂಡಿದ್ದು, ಆತನಿಗೆ ಭಾರೀ ದಂಡ ವಿಧಿಸಿದ್ದಾರೆ.
ವಾಹನದ ಮೇಲೆ ಮೋಟಾರು ವಾಹನ ಕಾಯ್ದೆ, 1988ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಅಲ್ಲದೆ, ಮುಂದೆಯೂ ಈ ರೀತಿಯ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ಪ್ರದೇಶದಲ್ಲಿ ಪೊಲೀಸರನ್ನೂ ನಿಯೋಜನೆ ಮಾಡಲಾಗಿದೆ.
ವರ್ಷಾಂತ್ಯದಲ್ಲಿ ಹಿಮಾಚಲ ಪ್ರದೇಶಕ್ಕೆ ಹಿಮಭರಿತ ಪರ್ವತಗಳನ್ನು ಆನಂದಿಸಲು ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಾರೆ. ಕಳೆದ ಮೂರು ದಿನಗಳಲ್ಲಿ, ಸುಮಾರು 55,000 ವಾಹನಗಳು ರೋಹ್ಟಾಂಗ್ನ ಅಟಲ್ ಸುರಂಗವನ್ನು ಹಾದು ಹೋಗಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುವ ಹಲವಾರು ವೀಡಿಯೊಗಳು ರಸ್ತೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿರುವುದನ್ನು ತೋರಿಸುತ್ತದೆ.
ನಿಮ್ಮ ಕಾಮೆಂಟ್ ಬರೆಯಿರಿ