ಅಯೋಧ್ಯೆ ರಾಮ ಮಂದಿರದ ಬಳಿ ತಮ್ಮದೇ ಬಂದೂಕಿನ ಗುಂಡು ತಗುಲಿ ಭದ್ರತಾ ಸಿಬ್ಬಂದಿ ಸಾವು

ಅಯೋಧ್ಯೆ : ಇಲ್ಲಿನ ರಾಮ ಮಂದಿರದಲ್ಲಿ ನಿಯೋಜನೆಗೊಂಡಿದ್ದ 25 ವರ್ಷದ ಪೊಲೀಸ್ ಜವಾನ ತನ್ನ ಸ್ವಂತ ಬಂದೂಕಿನಿಂದ ಗುಂಡು ತಗುಲಿ ಮೃತಪಟ್ಟಿದ್ದಾರೆ. ಇದು ಆಕಸ್ಮಿಕವಾಗಿ ಗುಂಡು ಹಾರಿದ್ದೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಶತ್ರುಘ್ನ ವಿಶ್ವಕರ್ಮ ಅವರನ್ನು ವಿಶೇಷ ಭದ್ರತಾ ಪಡೆಯ (ಎಸ್‌ಎಸ್‌ಎಫ್) ಭಾಗವಾಗಿ ದೇವಾಲಯದ ಆವರಣದಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿತ್ತು.
ಬುಧವಾರ ಬೆಳಗ್ಗೆ 5:25ಕ್ಕೆ ಈ ಘಟನೆ ನಡೆದಿದೆ. ಇದು ಆಕಸ್ಮಿಕವಾಗಿ ಗುಂಡಿನ ದಾಳಿಯೇ ಅಥವಾ ಆತ್ಮಹತ್ಯೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎಂದು ಇನ್ಸ್‌ಪೆಕ್ಟರ್ ಜನರಲ್ ಪ್ರವೀಣಕುಮಾರ ತಿಳಿಸಿದ್ದಾರೆ.

ಕೋಟೇಶ್ವರ ದೇವಸ್ಥಾನದ ಮುಂಭಾಗದ ವಿಐಪಿ ಗೇಟ್ ಬಳಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿತ್ತು. ಇದು ರಾಮಮಂದಿರದ ಗರ್ಭಗುಡಿಯು ಸ್ಥಳದಿಂದ ಕೇವಲ 150 ಮೀಟರ್ ದೂರದಲ್ಲಿದೆ. ತನಿಖೆ ಮತ್ತು ಮರಣೋತ್ತರ ಪರೀಕ್ಷೆ ವರದಿಯ ನಂತರ ಹೆಚ್ಚಿನ ಸ್ಪಷ್ಟತೆ ದೊರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ ಆಗಸ್ಟ್ 25 ರಂದು, ರಾಮ ಜನ್ಮಭೂಮಿಯ ಭದ್ರತೆಗೆ ನಿಯೋಜಿಸಲಾಗಿದ್ದ ಪಿಎಸಿ (PAC) ಕಾನ್‌ಸ್ಟೆಬಲ್ ಬುಲೆಟ್ ಗಾಯಗಳಿಂದ ಮೃತಪಟ್ಟಿದ್ದರು. 2019 ರ ಬ್ಯಾಚ್‌ನ ಕುಲದೀಪ ತ್ರಿಪಾಠಿ (24) ಪಿಎಸಿಯ 25 ನೇ ಬೆಟಾಲಿಯನ್‌ನಲ್ಲಿದ್ದರು. ಆಗ ಅವರು ತಮ್ಮದೇ ಸೇವಾ ಆಯುಧದಿಂದ ಬುಲೆಟ್ ಶಾಟ್ ತಗುಲಿ ಮೃತಪಟ್ಟಿದ್ದರು ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಕೇವಲ 23ನೇ ವಯಸ್ಸಿಗೆ 19 ಸರ್ಕಾರಿ ಪರೀಕ್ಷೆ ಪಾಸ್ ! ರಾಷ್ಟ್ರಪತಿಯಿಂದ 'ಅಟ್-ಹೋಮ್' ಗೌರವಕ್ಕೆ ಆಯ್ಕೆಯಾದ ಯುವತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement