ಮುಂಬೈ: ಎನ್ಸಿಪಿ ಬಂಡಾಯ ಶಾಸಕರು ಮಹಾರಾಷ್ಟ್ರ ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ ನಂತರ ಸಂಪುಟ ಪುನರ್ರರಚನೆ ಮಾಡಲಾಗಿದೆ.
ಉಪಮುಖ್ಯಮಂತ್ರಿ ಅಜಿತ ಪವಾರ್ ಅವರಿಗೆ ಹಣಕಾಸು ಮತ್ತು ಯೋಜನೆ ಹಾಗೂ ಛಗನ್ ಭುಜಬುಲ್ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ನೀಡಲಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಕೆಲ ಶಾಸಕರ ವಿರೋಧದ ನಡುವೆಯೂ ಅಜಿತ್ ಅವರಿಗೆ ಹಣಕಾಸು ಖಾತೆ ನೀಡಲಾಗಿದೆ.
ಇಂದಿನ ಸಂಪುಟ ಪುನಾರಚನೆಯಲ್ಲಿ ಎನ್ಸಿಪಿಯ ಅಜಿತ್ ಪವಾರ್ ಬಣದ ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ ಸಹಕಾರ ಸಚಿವಾಲಯ, ಧನಂಜಯ್ ಮುಂಡೆಗೆ ಕೃಷಿ, ಅದಿತಿ ತತ್ಕರೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅನಿಲ ಪಾಟೀಲ್ ಅವರಿಗೆ ಪರಿಹಾರ ಮತ್ತು ಪುನರ್ವಸತಿ, ವಿಪತ್ತು ನಿರ್ವಹಣೆ ಖಾತೆ ನೀಡಲಾಗಿದೆ.
ಸಂಪುಟ ಪುನಾರಚನೆಯ ನಂತರವೂ ಸರ್ಕಾರದಲ್ಲಿ ಅಸಮಾಧಾನ ಇನ್ನೂ ಮುಂದುವರಿದಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಕ್ಷಣದ ವಿಸ್ತರಣೆ ಮಾಡಿದ್ದರೂ ಅಧಿಕಾರ ಹಂಚಿಕೆ ಮಾತ್ರ ಜುಲೈ 17 ರಂದು ಪ್ರಾರಂಭವಾಗುವ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ನಂತರ ನಡೆಯಬೇಕು ಎಂಬ ಅಭಿಪ್ರಾಯವನ್ನು ಬಿಜೆಪಿ ತೆಗೆದುಕೊಂಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ