ಕರ್ನಾಟಕದಲ್ಲಿ ಸೋಮವಾರ 279 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಸೋಮವಾರ 279 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಹಾಗೂ ಮೂವರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದೇ ವೇಳೆ 235 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಒಟ್ಟು 1,222 ಸಕ್ರಿಯ ಕೊರೊನಾ ಪ್ರಕರಣಗಳಿವೆ.
ಮೈಸೂರು ಜಿಲ್ಲೆಯಲ್ಲಿ ಇಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರೆ ಬೆಂಗಳೂರಿನಲ್ಲಿ ಒಂದು ಸಾವು ದಾಖಲಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 6,359 ಜನರನ್ನು ಕೊವೀಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, 279 ಮಂದಿಗೆ ಸೋಂಕು ದೃಢಪಟ್ಟಿದೆ. ಇದೇ ವೇಳೆ 235 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಧನಾತ್ಮಕ ದರ ಶೇಕಡಾ 4.38 ರಷ್ಟಿದೆ.
ಜಿಲ್ಲಾವಾರು ಪ್ರಕರಣಗಳು..
ಬೆಂಗಳೂರು- 134, ಮೈಸೂರು 23, ಹಾಸನ 13, ಬಳ್ಳಾರಿ 11, ಚಿಕ್ಕಮಗಳೂರು 8, ರಾಯಚೂರು 8, ವಿಜಯನಗರ 8, ಚಿಕ್ಕಬಳ್ಳಾಪುರ 7, ಚಿತ್ರದುರ್ಗ 7, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7, ಉತ್ತರ ಕನ್ನಡ 6, ಬೆಂಗಳೂರು ಗ್ರಾಮಾಂತರ 5, ಚಾಮರಾಜನಗರ 5, ಗದಗ 5, ಕೊಡಗು 5, ಬಾಗಲಕೋಟೆ 4, ದಾವಣಗೆರೆ 4, ಧಾರವಾಡ 4, ಕಲಬುರಗಿ 4, ಕೋಲಾರ 3, ಮಂಡ್ಯ 3, ಬೆಳಗಾವಿ ಜಿಲ್ಲೆಯಲ್ಲಿ 2, ರಾಮನಗರ, ತುಮಕೂರು, ಯಾದಗಿರಿ ಜಿಲ್ಲೆಯಲ್ಲಿ ತಲಾ 1 ಪ್ರಕರಣಗಳು ದಾಖಲಾಗಿವೆ.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement